24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಉಜಿರೆ: ಶ್ರೀ ಧ. ಮಂ. ಶಿಕ್ಷಣ ಮಹಾವಿದ್ಯಾಲಯ ಉಜಿರೆ ಇಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಡಾ. ಪ್ರಣವ್ ಪಿ ಪಿ, ಅಸೋಸಿಯೇಟ್ ಪ್ರೊಫೆಸರ್, ಎಸ್.ಡಿ.ಎಂ. ಪ್ರಕೃತಿ ಮತ್ತು ಯೋಗ ಚಿಕಿತ್ಸಾ ಕಾಲೇಜು, ಉಜಿರೆ ಇವರು ಮಾತನಾಡಿ ? ಯೋಗವು ಮಾನವನ ಮಾನಸಿಕ, ದೈಹಿಕ, ನೈತಿಕ, ಆಧ್ಯಾತ್ಮಿಕ ಬೆಳವಣಿಗೆಗೆ ಸಹಕಾರಿಯಾಗಿದೆ. ಯೋಗವು ಆತ್ಮ ಸಂತೃಪ್ತಿ ಹಾಗೂ ಸಂತೋಷವನ್ನು ಹೆಚ್ಚಿಸುತ್ತದೆ. ಯೋಗವು ಮಗುವಿನ ಬೆಳವಣಿಗೆಗೆ ಹಾಗೂ ಮಾನಸಿಕ ಖಿನ್ನತೆಯಿಂದ ಹೊರಬರಲು ಸಹಕರಿಸುತ್ತದೆ ಎಂದು ಹೇಳಿದರು.


ಯೋಗವು ಎಲ್ಲಾ ರೀತಿಯ ಕಾಯಿಲೆಗಳಿಗೆ, ಉಸಿರಾಟ ಪ್ರಕ್ರಿಯೆಗೆ, ದೈಹಿಕ ಸಮತೋಲನ ಹಾಗೂ ಮಾನಸಿಕ ಉದ್ವೇಗ ನಿಯಂತ್ರಣಕ್ಕೆ ಬಹುಮುಖ್ಯವಾಗಿದೆ. ಯೋಗವು ಏಕಾಗ್ರತೆಯನ್ನು ವೃದ್ಧಿಸಲು, ಒತ್ತಡದಿಂದ ಹೊರಬರಲು, ಧ್ವನಿ ವೃದ್ಧಿಸಲು ಶಿಕ್ಷಕರಿಗೆ ಸಹಕರಿಸುತ್ತದೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಯೋಗವನ್ನು ಕಲಿಸಬೇಕು. ಪಠ್ಯಕ್ರಮದಲ್ಲಿ ಯೋಗವು ಸೇರಬೇಕು ಎಂದು ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಸಲ್ಡಾನ್ಹ ಅಭಿಪ್ರಾಯ ವ್ಯಕ್ತಪಡಿಸಿದರು.


ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ವಿದ್ಯಾಶ್ರೀ ಪಿ, ತಿರುಮಲೇಶ್ ರಾವ್ ಎನ್ ಕೆ, ಅನುಷಾ ಡಿ ಜೆ ಹಾಗೂ ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.


ಕಾರ್ಯಕ್ರಮವನ್ನು ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳಾದ ಸ್ವಾತಿ ಸ್ವಾಗತಿಸಿ, ಮಲ್ಲಿಕಾರ್ಜುನ ವಂದಿಸಿ, ಪ್ರತಿಮಾ ಕಾರ್ಯಕ್ರಮ ನಿರೂಪಿಸಿದರು.

Related posts

ಮೇಲಂತಬೆಟ್ಟು: ಉಜ್ವಲ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ವಿತರಣೆ

Suddi Udaya

ಅಶ್ವಮೇಧ ಕಾಮರ್ಸ್ ಫೆಸ್ಟ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಪುಂಜಾಲಕಟ್ಟೆ ವಲಯಮಟ್ಟದ ಪ್ರೌಢಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟ ಉದ್ಘಾಟನೆ

Suddi Udaya

ಅರಸಿನಮಕ್ಕಿ ವಲಯದ ಶ್ರೀ ಕ್ಷೇ.ಧ. ಗ್ರಾ. ಯೋಜನೆಯ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಪ್ರೋ| ಎ. ಕೃಷ್ಣಪ್ಪ ಪೂಜಾರಿಯವರಿಗೆ ಪೇಜಾವರ ಶ್ರೀ ವಿಶ್ವೇಶತೀರ್ಥ “ಜೀವಮಾನ ಸಾಧನಾ ಪ್ರಶಸ್ತಿ”

Suddi Udaya

ಇಂದಬೆಟ್ಟು ಸ.ಹಿ. ಪ್ರಾ. ಶಾಲೆಯ ಎಸ್‌ಡಿಎಂಸಿ ಸಮಿತಿ ರಚನೆ

Suddi Udaya
error: Content is protected !!