September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಉಜಿರೆ: ಶ್ರೀ ಧ. ಮಂ. ಶಿಕ್ಷಣ ಮಹಾವಿದ್ಯಾಲಯ ಉಜಿರೆ ಇಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಡಾ. ಪ್ರಣವ್ ಪಿ ಪಿ, ಅಸೋಸಿಯೇಟ್ ಪ್ರೊಫೆಸರ್, ಎಸ್.ಡಿ.ಎಂ. ಪ್ರಕೃತಿ ಮತ್ತು ಯೋಗ ಚಿಕಿತ್ಸಾ ಕಾಲೇಜು, ಉಜಿರೆ ಇವರು ಮಾತನಾಡಿ ? ಯೋಗವು ಮಾನವನ ಮಾನಸಿಕ, ದೈಹಿಕ, ನೈತಿಕ, ಆಧ್ಯಾತ್ಮಿಕ ಬೆಳವಣಿಗೆಗೆ ಸಹಕಾರಿಯಾಗಿದೆ. ಯೋಗವು ಆತ್ಮ ಸಂತೃಪ್ತಿ ಹಾಗೂ ಸಂತೋಷವನ್ನು ಹೆಚ್ಚಿಸುತ್ತದೆ. ಯೋಗವು ಮಗುವಿನ ಬೆಳವಣಿಗೆಗೆ ಹಾಗೂ ಮಾನಸಿಕ ಖಿನ್ನತೆಯಿಂದ ಹೊರಬರಲು ಸಹಕರಿಸುತ್ತದೆ ಎಂದು ಹೇಳಿದರು.


ಯೋಗವು ಎಲ್ಲಾ ರೀತಿಯ ಕಾಯಿಲೆಗಳಿಗೆ, ಉಸಿರಾಟ ಪ್ರಕ್ರಿಯೆಗೆ, ದೈಹಿಕ ಸಮತೋಲನ ಹಾಗೂ ಮಾನಸಿಕ ಉದ್ವೇಗ ನಿಯಂತ್ರಣಕ್ಕೆ ಬಹುಮುಖ್ಯವಾಗಿದೆ. ಯೋಗವು ಏಕಾಗ್ರತೆಯನ್ನು ವೃದ್ಧಿಸಲು, ಒತ್ತಡದಿಂದ ಹೊರಬರಲು, ಧ್ವನಿ ವೃದ್ಧಿಸಲು ಶಿಕ್ಷಕರಿಗೆ ಸಹಕರಿಸುತ್ತದೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಯೋಗವನ್ನು ಕಲಿಸಬೇಕು. ಪಠ್ಯಕ್ರಮದಲ್ಲಿ ಯೋಗವು ಸೇರಬೇಕು ಎಂದು ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಸಲ್ಡಾನ್ಹ ಅಭಿಪ್ರಾಯ ವ್ಯಕ್ತಪಡಿಸಿದರು.


ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ವಿದ್ಯಾಶ್ರೀ ಪಿ, ತಿರುಮಲೇಶ್ ರಾವ್ ಎನ್ ಕೆ, ಅನುಷಾ ಡಿ ಜೆ ಹಾಗೂ ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.


ಕಾರ್ಯಕ್ರಮವನ್ನು ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳಾದ ಸ್ವಾತಿ ಸ್ವಾಗತಿಸಿ, ಮಲ್ಲಿಕಾರ್ಜುನ ವಂದಿಸಿ, ಪ್ರತಿಮಾ ಕಾರ್ಯಕ್ರಮ ನಿರೂಪಿಸಿದರು.

Related posts

ಲಿಂಗ ಸಮಾನತೆ ಮತ್ತು ಮಹಿಳೆಯರ ಸಬಲೀಕರಣ ಕುರಿತು ಡಿ. ವೀರೇಂದ್ರ ಹೆಗ್ಗಡೆಯವರು ವೀಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಧಾರೆ ಮಂಡನೆ

Suddi Udaya

ಬಿಜೆಪಿ ಜಿಲ್ಲಾ ಎಸ್ಟಿ ಮೋರ್ಚಾದ ಉಪಾಧ್ಯಕ್ಷರಾಗಿ ಉಮನಾಥ್ ಧರ್ಮಸ್ಥಳ, ಕೋಶಾಧಿಕಾರಿಯಾಗಿ ಹರೀಶ್ ಎಳನೀರು ಆಯ್ಕೆ

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ : ಎಸ್.ಡಿ.ಪಿ.ಐ ಪಕ್ಷ ಸಮಾವೇಶ

Suddi Udaya

ಪಡಂಗಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ತ್ರೋಬಾಲ್ ಪಂದ್ಯಾವಳಿಯಲ್ಲಿ ಅಂಡೆತಡ್ಕ ಶಾಲೆಯ ಬಾಲಕರ ತಂಡ ದ್ವಿತೀಯ: ಇಬ್ಬರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
error: Content is protected !!