25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಬೆಳ್ತಂಗಡಿ, ಜೂನ್ 21: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಮತ್ತು 10 ದಿನಗಳ ಯೋಗ ತರಬೇತಿ ಶಿಬಿರ ಜೂ.21ರಂದು ಸಂಪನ್ನಗೊಂಡಿತು.

ಕಾರ್ಯಕ್ರಮದ ಮುಖ್ಯ ಅತಿಥಿ, ಎಸ್ ಡಿ ಎಂ ಪ್ರಕೃತಿ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ಎಂ.ಡಿ ವಿದ್ಯಾರ್ಥಿ ಡಾ. ಐಶ್ವರ್ಯ ಮಾತನಾಡಿ, ದಿನ ನಿತ್ಯದ ಒತ್ತಡ ನಿವಾರಣೆಗೆ ಯೋಗ ಸಹಕಾರಿಯಾಗಿದೆ. ಪ್ರತಿ ನಿತ್ಯ ಯೋಗಾಭ್ಯಾಸ ಮಾಡಿ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ನೀಡಿದ ಡಾ. ಐಶ್ವರ್ಯ ಇವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.  

ತರಬೇತಿ ಪಡೆದ 110 ವಿದ್ಯಾರ್ಥಿಗಳು ವಿವಿಧ ಯೋಗ ಆಸನಗಳನ್ನು ಪ್ರದರ್ಶಿಸಿದರು.

ಶಾಲಾ ಮುಖ್ಯ ಶಿಕ್ಷಕಿ ಹೇಮಲತಾ ಎಂ ಆರ್ ಮತ್ತು ದೈಹಿಕ ಶಿಕ್ಷಕ ಪ್ರವೀಣ್ ಕುಮಾರ್ ಅವರ ಮಾರ್ಗದರ್ಶನದಲ್ಲಿ, ಎಲ್ಲಾ ಶಿಕ್ಷಕರ ಸಹಕಾರದೊಂದಿಗೆ ಕಾರ್ಯಕ್ರಮ ಸಂಯೋಜಿಸಲಾಯಿತು. ಶಿಕ್ಷಕರಾದ ಮುರಳಿ ಸ್ವಾಗತಿಸಿ, ಮಂಜುನಾಥ್ ವಂದಿಸಿದರು. ಶಿಕ್ಷಕ ಶ್ರೇಯಾಂಸ್ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಕಡಿರ ನಾಗಬನದಲ್ಲಿ ನಾಗದೇವರಿಗೆ ತಂಬಿಲ ಸೇವೆ

Suddi Udaya

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲೆ ಹಲ್ಲೆ ಮಾಡಿರುವ ಪೊಲೀಸರನ್ನು ಬಂಧಿಸುವಂತೆ ಒತ್ತಾಯಿಸಿ ಬೆಳ್ತಂಗಡಿ ನ್ಯಾಯಾಲಯದ ಸಂಕೀರ್ಣದಲ್ಲಿ ಪ್ರತಿಭಟನೆ

Suddi Udaya

ಬಿಲ್ಲವ ಜಾತಿ ಮಾತ್ರ, ಉಪಜಾತಿ ಇಲ್ಲ, ಬಿಲ್ಲವ ಸಮುದಾಯದ ಪ್ರತಿಯೊಬ್ಬರು ಜಾತಿ ಕಾಲಂ ನಂ 9ರಲ್ಲಿ ‘ಬಿಲ್ಲವ ‘ ಎಂದೇ ನಮೂದಿಸಿ: ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಹೇಳಿಕೆ

Suddi Udaya

ನ್ಯೂ ವೈಬ್ರೆಂಟ್ ಪ.ಪೂ. ಕಾಲೇಜಿನಲ್ಲಿ ಹಿರೋಷಿಮಾ ದಿನದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಓಡಿಲ್ನಾಳ: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟ; ಕಳಿಯ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ವಸಂತ ಮಜಲು ಭೇಟಿ ನೀಡಿ ತುರ್ತು ಪರಿಹಾರ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಕುರಿತು ಐಇಸಿ ಚಟುವಟಿಕೆ

Suddi Udaya
error: Content is protected !!