22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಉಜಿರೆ: ಶ್ರೀ ಧ. ಮಂ. ಶಿಕ್ಷಣ ಮಹಾವಿದ್ಯಾಲಯ ಉಜಿರೆ ಇಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಡಾ. ಪ್ರಣವ್ ಪಿ ಪಿ, ಅಸೋಸಿಯೇಟ್ ಪ್ರೊಫೆಸರ್, ಎಸ್.ಡಿ.ಎಂ. ಪ್ರಕೃತಿ ಮತ್ತು ಯೋಗ ಚಿಕಿತ್ಸಾ ಕಾಲೇಜು, ಉಜಿರೆ ಇವರು ಮಾತನಾಡಿ ? ಯೋಗವು ಮಾನವನ ಮಾನಸಿಕ, ದೈಹಿಕ, ನೈತಿಕ, ಆಧ್ಯಾತ್ಮಿಕ ಬೆಳವಣಿಗೆಗೆ ಸಹಕಾರಿಯಾಗಿದೆ. ಯೋಗವು ಆತ್ಮ ಸಂತೃಪ್ತಿ ಹಾಗೂ ಸಂತೋಷವನ್ನು ಹೆಚ್ಚಿಸುತ್ತದೆ. ಯೋಗವು ಮಗುವಿನ ಬೆಳವಣಿಗೆಗೆ ಹಾಗೂ ಮಾನಸಿಕ ಖಿನ್ನತೆಯಿಂದ ಹೊರಬರಲು ಸಹಕರಿಸುತ್ತದೆ ಎಂದು ಹೇಳಿದರು.


ಯೋಗವು ಎಲ್ಲಾ ರೀತಿಯ ಕಾಯಿಲೆಗಳಿಗೆ, ಉಸಿರಾಟ ಪ್ರಕ್ರಿಯೆಗೆ, ದೈಹಿಕ ಸಮತೋಲನ ಹಾಗೂ ಮಾನಸಿಕ ಉದ್ವೇಗ ನಿಯಂತ್ರಣಕ್ಕೆ ಬಹುಮುಖ್ಯವಾಗಿದೆ. ಯೋಗವು ಏಕಾಗ್ರತೆಯನ್ನು ವೃದ್ಧಿಸಲು, ಒತ್ತಡದಿಂದ ಹೊರಬರಲು, ಧ್ವನಿ ವೃದ್ಧಿಸಲು ಶಿಕ್ಷಕರಿಗೆ ಸಹಕರಿಸುತ್ತದೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಯೋಗವನ್ನು ಕಲಿಸಬೇಕು. ಪಠ್ಯಕ್ರಮದಲ್ಲಿ ಯೋಗವು ಸೇರಬೇಕು ಎಂದು ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಸಲ್ಡಾನ್ಹ ಅಭಿಪ್ರಾಯ ವ್ಯಕ್ತಪಡಿಸಿದರು.


ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ವಿದ್ಯಾಶ್ರೀ ಪಿ, ತಿರುಮಲೇಶ್ ರಾವ್ ಎನ್ ಕೆ, ಅನುಷಾ ಡಿ ಜೆ ಹಾಗೂ ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.


ಕಾರ್ಯಕ್ರಮವನ್ನು ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳಾದ ಸ್ವಾತಿ ಸ್ವಾಗತಿಸಿ, ಮಲ್ಲಿಕಾರ್ಜುನ ವಂದಿಸಿ, ಪ್ರತಿಮಾ ಕಾರ್ಯಕ್ರಮ ನಿರೂಪಿಸಿದರು.

Related posts

ಹರಿಯಾಣದಲ್ಲಿ ನಡೆಯುವ ಗೋಲ್ಡನ್ ಆರೋ ರ್‍ಯಾಲಿಗೆ ಬೆಳ್ತಂಗಡಿಯ ಸೇವಂತಿ, ದ್ವಿಶಾ ಆಯ್ಕೆ

Suddi Udaya

ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹುಟ್ಟುಹಬ್ಬ: ನಾಗೇಶ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಕೊಕ್ಕಡ ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ ಅಂಗನವಾಡಿ ಕೇಂದ್ರದಲ್ಲಿ ಆಚರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಥಮ ಚಿಕಿತ್ಸಾ ಕಾರ್ಯಾಗಾರ

Suddi Udaya

ಲೋಕೋಪಯೋಗಿ ಸಚಿವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಉಜಿರೆ: ನೆನಪಿನ ಅಂಗಳ ಕಾರ್ಯಕ್ರಮದಲ್ಲಿ ಮನೋರಮ ಭಟ್ ರವರಿಗೆ ಸನ್ಮಾನ

Suddi Udaya
error: Content is protected !!