27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ಪ್ರಶಿಕ್ಷಣ ಕಾರ್ಯಾಗಾರ

ಉಜಿರೆ: ವಿದ್ಯಾರ್ಥಿಗಳ ಸೃಜನಶೀಲತೆಯೊಂದಿಗೆ ಸಾಮಾಜಿಕ ಕಳಕಳಿಯ ಕಾರ್ಯಗಳಿಗೆ ಉತ್ತಮ ವೇದಿಕೆಯಾಗಿ ರಾಷ್ಟ್ರೀಯ ಸೇವಾ ಯೋಜನೆಯು ಕಾರ್ಯನಿರ್ವಹಿಸುತ್ತಿದೆ. ಸಮಾಜಮುಖಿ ಕಾರ್ಯಗಳ ಮೂಲಕ ವ್ಯಕ್ತಿತ್ವ ನಿರ್ಮಾಣ ಇದರಿಂದ ಸಾಧ್ಯ. ಸಮಾಜದಲ್ಲಿ ಉತ್ತಮರಾಗಿ ಹೊರಹೊಮ್ಮಲು ಮಾತ್ರವಲ್ಲದೆ ಪರಿಸರ ಕಾಳಜಿ, ವೈಯುಕ್ತಿಕ ಸ್ವಚ್ಛತೆ , ಆತ್ಮವಿಶ್ವಾಸ ಬೆಳೆಸಿಕೊಳ್ಳಲು ರಾ. ಸೇ. ಯೋಜನೆ ಸಹಾಯಕವಾಗಿದೆ. ಒಟ್ಟಾರೆ ಸಾಮಾಜಿಕ ಸಾಮರಸ್ಯ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಿಗೆ ಇದು ಬುನಾದಿಯಾಗಿದೆ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕ ಹಾಗೂ ರಾ.ಸೇ.ಯೋಜನೆಯ ಪೂರ್ವ ಯೋಜನಾಧಿಕಾರಿ ಅವನೀಶ್. ಪಿ. ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ನಡೆದ ಪ್ರಶಿಕ್ಷಣ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಸ್ವಯಂ ಸೇವಕರು ರಚಿಸಿದ ಭಿತ್ತಿಪತ್ತಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಗೌರವಿಸಿದರು. ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ , ನಾಯಕರಾದ ಆದಿತ್ಯ ಹಾಗೂ ಪ್ರಾಪ್ತಿ ಉಪಸ್ಥಿತರಿದ್ದರು.

ಶಶಾಂಕ್ ಸ್ವಾಗತಿಸಿ , ಅಪರ್ಣಾ ವಂದಿಸಿದರು. ಹರ್ಷಿತಾ ನಿರೂಪಿಸಿದರು.

Related posts

ಬೆಳಾಲು ಶ್ರೀ ಧ. ಮ. ಅನುದಾನಿತ ಪ್ರೌಢಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ ಅಧ್ಯಕ್ಷರಾಗಿ ಜಯರಾಮ ಕುದ್ರೆತ್ತಾಯ ಧರ್ಮಸ್ಥಳ ಆಯ್ಕೆ

Suddi Udaya

ಶಿಬಾಜೆ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರ ಭಜನೋತ್ಸವ: ಶೌರ್ಯ ವಿಪತ್ತು ತಂಡದಿಂದ ಶ್ರಮದಾನ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ಧೇಶ ಸಹಕಾರ ಸಂಘದ ಮಹಾಸಭೆ: ರೂ.3.84 ಕೋಟಿ ನಿವ್ವಳ ಲಾಭ – ಶೇ.15 ಡಿವಿಡೆಂಟ್ ಘೋಷಣೆ

Suddi Udaya

ಮದ್ದಡ್ಕ ಮಸೀದಿ ಬಳಿ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!