38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟ ಗಾಯಕ್ಕೊಳಗಾಗಿದ್ದ ನೇಪಾಳಿ ಮಹಿಳೆ ಸಾವು

ಕೊಕ್ಕಡ: ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟ ಗಾಯಕ್ಕೊಳಗಾಗಿದ್ದ ನೇಪಾಳಿ ಮೂಲದ ಮಹಿಳೆಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಕೊಕ್ಕಡದಲ್ಲಿ ನಡೆದಿದೆ.


ಮೂಲತ: ನೇಪಾಳಿಯಾಗಿದ್ದು ಕೊಕ್ಕಡ ಗ್ರಾಮದ ಮುಂಡೂರುಪಳಿಕೆ ಶಾಲೆಯ ಬಳಿ ವಾಸವಾಗಿದ್ದ ಚಕ್ರ ಬಹದ್ದೂರು ಮಲ್ಲ ಎಂಬವರ ಪತ್ನಿ ಬಸಂತಿದೇವಿ(44ವ.) ಮೃತಪಟ್ಟವರು. ಇವರು ಜೂ.11ರಂದು ಸಂಜೆ ಅಡುಗೆ ಮಾಡುವ ಸಲುವಾಗಿ ಸೌದೆ ಉರಿಸಲು ಮನೆಯಲ್ಲಿ ತೋಟದ ಕೆಲಸಕ್ಕೆ ತಂದಿಟ್ಟಿದ್ದ ಪೆಟ್ರೋಲ್ ಬಳಸಿದಾಗ ಆಕಸ್ಮಿಕವಾಗಿ ಒಮ್ಮೆಲೇ ಬೆಂಕಿಯು ಬಸಂತಿದೇವಿ ಧರಿಸಿದ್ದ ಬಟ್ಟೆಗೆ ತಗಲಿ ಮೈಯೆಲ್ಲ ತೀವ್ರ ತರದ ಸುಟ್ಟಗಾಯ ಉಂಟಾಗಿತ್ತು. ಅವರನ್ನು ಉಡುಪಿಯ ಆದರ್ಶ ಆಸ್ಪತ್ರೆಯ ತೀವ್ರ ನಿಗಾ ವಿಭಾಗದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಜೂ.18ರಂದು ಸಂಜೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ಚಕ್ರ ಬಹದ್ದೂರು ಅವರು ನೀಡಿರುವ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮಳೆಯ ರಭಸಕ್ಕೆ ಕಣಿಯಾಗಿ ಮಾರ್ಪಾಡುಗೊಂಡ ವಿದ್ಯಾರ್ಥಿಗಳು ಶಾಲೆಗೆ ಹೋಗುವ ಕಾಲುದಾರಿ: ಕನ್ಯಾಡಿ, ಧರ್ಮಸ್ಥಳ, ಉಜಿರೆಗೆ ಹೋಗುವ ಈ ಕಾಲುದಾರಿಯ ದುರಸ್ತಿಗೆ ಗ್ರಾಮಸ್ಥರ ಒತ್ತಾಯ

Suddi Udaya

ಸ್ವಾತಂತ್ರ್ಯ ಸಿಕ್ಕಿ 75 ವರ್ಷ ಕಳೆದರೂ ಹಲವಾರು ಕುಟುಂಬಗಳಿಗೆ ಇನ್ನೂ ವಿದ್ಯುತ್ ಭಾಗ್ಯವಿಲ್ಲ: ವಿದ್ಯುತ್ ವ್ಯವಸ್ಥೆ ಕಲ್ಪಿಸಲು ಅಳದಂಗಡಿ ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya

ಧರ್ಮಸ್ಥಳ- ಕಾರ್ಯತಡ್ಕ- ಪಾದೆ- ಅರಸಿನಮಕ್ಕಿ -ಶಿಶಿಲ ಮಾರ್ಗವಾಗಿ ಸರ್ಕಾರಿ ಬಸ್ ಸಂಚಾರ ಮರು ಪ್ರಾರಂಭಿಸುವಂತೆ ಕಳೆಂಜ ಕಾಂಗ್ರೆಸ್ ಗ್ರಾಮ ಸಮಿತಿಯಿಂದ ಮನವಿ

Suddi Udaya

ಲಾಯಿಲ: ಕಂಪ್ಯೂಟ‌ರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಅಂಡಿಂಜೆ: ಯುವಕ ಮಂಡಲದಿಂದ ಮೊಸರು ಕುಡಿಕೆ ಉತ್ಸವ, ವಿವಿಧ ಆಟೋಟ ಸ್ಪರ್ಧೆಗಳು

Suddi Udaya
error: Content is protected !!