27 C
ಪುತ್ತೂರು, ಬೆಳ್ತಂಗಡಿ
June 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟ ಗಾಯಕ್ಕೊಳಗಾಗಿದ್ದ ನೇಪಾಳಿ ಮಹಿಳೆ ಸಾವು

ಕೊಕ್ಕಡ: ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟ ಗಾಯಕ್ಕೊಳಗಾಗಿದ್ದ ನೇಪಾಳಿ ಮೂಲದ ಮಹಿಳೆಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಕೊಕ್ಕಡದಲ್ಲಿ ನಡೆದಿದೆ.


ಮೂಲತ: ನೇಪಾಳಿಯಾಗಿದ್ದು ಕೊಕ್ಕಡ ಗ್ರಾಮದ ಮುಂಡೂರುಪಳಿಕೆ ಶಾಲೆಯ ಬಳಿ ವಾಸವಾಗಿದ್ದ ಚಕ್ರ ಬಹದ್ದೂರು ಮಲ್ಲ ಎಂಬವರ ಪತ್ನಿ ಬಸಂತಿದೇವಿ(44ವ.) ಮೃತಪಟ್ಟವರು. ಇವರು ಜೂ.11ರಂದು ಸಂಜೆ ಅಡುಗೆ ಮಾಡುವ ಸಲುವಾಗಿ ಸೌದೆ ಉರಿಸಲು ಮನೆಯಲ್ಲಿ ತೋಟದ ಕೆಲಸಕ್ಕೆ ತಂದಿಟ್ಟಿದ್ದ ಪೆಟ್ರೋಲ್ ಬಳಸಿದಾಗ ಆಕಸ್ಮಿಕವಾಗಿ ಒಮ್ಮೆಲೇ ಬೆಂಕಿಯು ಬಸಂತಿದೇವಿ ಧರಿಸಿದ್ದ ಬಟ್ಟೆಗೆ ತಗಲಿ ಮೈಯೆಲ್ಲ ತೀವ್ರ ತರದ ಸುಟ್ಟಗಾಯ ಉಂಟಾಗಿತ್ತು. ಅವರನ್ನು ಉಡುಪಿಯ ಆದರ್ಶ ಆಸ್ಪತ್ರೆಯ ತೀವ್ರ ನಿಗಾ ವಿಭಾಗದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಜೂ.18ರಂದು ಸಂಜೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ಚಕ್ರ ಬಹದ್ದೂರು ಅವರು ನೀಡಿರುವ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕೊಯ್ಯೂರು ಸ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ ಹಾಗೂ ಸುಜ್ಞಾನ ಬಯಲು ರಂಗಮಂದಿರ ಉದ್ಘಾಟನೆ

Suddi Udaya

ಸೆ.7-9: ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಅ.29: ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ:  ವಾಹನಗಳಿಗೆ ರಸ್ತೆ ಬದಲಾವಣೆ

Suddi Udaya

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ಬಚ್ಚಿರೆ ಬಜ್ಜೈ ವಾಟ್ಸಾಪ್ ಗ್ರೂಪ್ ಸ್ನೇಹ ಸಮ್ಮಿಲನ

Suddi Udaya

ಮೊಗ್ರು ಊoತನಾಜೆ ಲಕ್ಷ್ಮೀ ನಾರಾಯಣ ಭಜನಾ ಮಂದಿರದಲ್ಲಿ ಕಣಿಯೂರು ವಲಯ ಮೊಗ್ರು ಒಕ್ಕೂಟದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya
error: Content is protected !!