25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟ ಗಾಯಕ್ಕೊಳಗಾಗಿದ್ದ ನೇಪಾಳಿ ಮಹಿಳೆ ಸಾವು

ಕೊಕ್ಕಡ: ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟ ಗಾಯಕ್ಕೊಳಗಾಗಿದ್ದ ನೇಪಾಳಿ ಮೂಲದ ಮಹಿಳೆಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಕೊಕ್ಕಡದಲ್ಲಿ ನಡೆದಿದೆ.


ಮೂಲತ: ನೇಪಾಳಿಯಾಗಿದ್ದು ಕೊಕ್ಕಡ ಗ್ರಾಮದ ಮುಂಡೂರುಪಳಿಕೆ ಶಾಲೆಯ ಬಳಿ ವಾಸವಾಗಿದ್ದ ಚಕ್ರ ಬಹದ್ದೂರು ಮಲ್ಲ ಎಂಬವರ ಪತ್ನಿ ಬಸಂತಿದೇವಿ(44ವ.) ಮೃತಪಟ್ಟವರು. ಇವರು ಜೂ.11ರಂದು ಸಂಜೆ ಅಡುಗೆ ಮಾಡುವ ಸಲುವಾಗಿ ಸೌದೆ ಉರಿಸಲು ಮನೆಯಲ್ಲಿ ತೋಟದ ಕೆಲಸಕ್ಕೆ ತಂದಿಟ್ಟಿದ್ದ ಪೆಟ್ರೋಲ್ ಬಳಸಿದಾಗ ಆಕಸ್ಮಿಕವಾಗಿ ಒಮ್ಮೆಲೇ ಬೆಂಕಿಯು ಬಸಂತಿದೇವಿ ಧರಿಸಿದ್ದ ಬಟ್ಟೆಗೆ ತಗಲಿ ಮೈಯೆಲ್ಲ ತೀವ್ರ ತರದ ಸುಟ್ಟಗಾಯ ಉಂಟಾಗಿತ್ತು. ಅವರನ್ನು ಉಡುಪಿಯ ಆದರ್ಶ ಆಸ್ಪತ್ರೆಯ ತೀವ್ರ ನಿಗಾ ವಿಭಾಗದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಜೂ.18ರಂದು ಸಂಜೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ಚಕ್ರ ಬಹದ್ದೂರು ಅವರು ನೀಡಿರುವ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬಿಜೆಪಿ ಕೊಕ್ಕಡ 239ನೇ ಬೂತು ಸಮಿತಿಯ ಅಧ್ಯಕ್ಷರಾಗಿ ಭಾಸ್ಕರ್ ಶೆಟ್ಟಿಗಾರ್, ಕಾರ್ಯದರ್ಶಿಯಾಗಿ ಕಿಶೋರ್ ಪೂಜಾರಿ ಆಯ್ಕೆ

Suddi Udaya

ಕಳೆಂಜ ಬಿರುಗಾಳಿ ಮಳೆಗೆಮನೆಗೆ ಮರ ಬಿದ್ದು ಹಾನಿ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಉಜಿರೆ: ಸ್ನೇಹ ಕಿರಣ್ ಬೇಬಿ ಸಿಟ್ಟಿಂಗ್ ಗೆ ಮರ ಬಿದ್ದು ಹಾನಿ, ಅಪಾಯದಿಂದ ಪಾರಾದ ಮಕ್ಕಳು

Suddi Udaya

ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕಕ್ಕೆ ಅತ್ಯುತ್ತಮ ‘ಟೈಮ್ಸ್ ಬ್ಯುಸಿನೆಸ್ ಅವಾರ್ಡ್ಸ್-2024’ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈಯವರಿಗೆ ಪ್ರಶಸ್ತಿ ಹಸ್ತಾಂತರ

Suddi Udaya

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ: ಬಿಡ್ಡಿಂಗ್ ಮಾದರಿಯ 8 ತಂಡಗಳ ನಿಶಾಂತ್ ಟ್ರೋಫಿ 2023 ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya
error: Content is protected !!