31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಳಂಜ: ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಇದರ ವತಿಯಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಉಜಿರೆ-ಧರ್ಮಸ್ಥಳ, ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು, ಶ್ರೀಮಾತಾ ನಾಲ್ಕೂರು, ಜ್ಯೋತಿ ಯುವತಿ ಮಂಡಲ ಬಳಂಜ, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇವರ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಜೂನ್ 15ರಿಂದ ಪ್ರಾರಂಭಗೊಂಡು 21ರ ವರೆಗೆ ಉಚಿತ ಯೋಗ ಶಿಬಿರವು ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನ ಬಳಂಜದಲ್ಲಿ ನಡೆಯಿತು.

ಕಳೆದೊಂದು ವಾರದಿಂದ ಯೋಗ ತರಭೇತಿಯನ್ನು ನೀಡುತ್ತಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಉಜಿರೆ-ಧರ್ಮಸ್ಥಳದ ಡಾ.ಅಭಿಷೇಕ್ ಮತ್ತು ಸುಶ್ಮಿತಾ ಶೆಟ್ಟಿಯವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್,
ಅಳದಂಗಡಿ ಪ್ರಾ.ಕೃ.ಪ.ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ಸಂಘದ ನಿಕಟಪೂರ್ವ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್,ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ,ಪ್ರಮುಖರಾದ ಕರುಣಾಕರ ಹೆಗ್ಡೆ ಬೊಕ್ಕಸ, ಸದಾನಂದ ಸಾಲಿಯಾನ್ ಬಳಂಜ, ಸತೀಶ್ ಕೆ ಬರಮೇಲು, ಸಂಘದ ನಿರ್ದೇಶಕ ರಂಜಿತ್ ಪೂಜಾರಿ,ಕಾರ್ಯದರ್ಶಿ ಜಗದೀಶ್ ಪೂಜಾರಿ,ಸೀತರಾಮ ಪೂಜಾರಿ ಮಜಲೋಡಿ, ಅನಸೂಯ, ನಾರಾಯಣ ಪೂಜಾರಿ, ಗೀರೀಶ್ ನಿಟ್ಟಡ್ಕ,ವಿಜಯ ಪೂಜಾರಿ, ಅನಿತಾ ಹೆಗ್ಡೆ,ಪುಷ್ಪಾವತಿ, ದಿನೇಶ್ ನಿಟ್ಟಡ್ಕ,ಅಚ್ಚುತ್ತಾ ಪೂಜಾರಿ, ವಿನಯ್ ಶೆಟ್ಟಿ, ಗಣೇಶ್ ದೇವಾಡಿಗ, ನಿತ್ಯಾನಂದ ಹೆಗ್ಡೆ, ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಸ್ವಾಗತಿಸಿ, ಎಲ್ಲರಿಗೂ ಕೃತಜ್ಞತೆ ಅರ್ಪಿಸಿದರು.

Related posts

ನಡ ಸರಕಾರಿ ಪ್ರೌಢಶಾಲೆಗೆ “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲಾ ಪ್ರಶಸ್ತಿ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ

Suddi Udaya

ಮದ್ದಡ್ಕ ಕಿನ್ನಿಗೋಳಿ ವರಕಬೆಯ ಬಳಿ ಹೂತು ಹೋದ ರಾಜ್ಯ ಹೆದ್ದಾರಿ ರಸ್ತೆ

Suddi Udaya

ಸೆ.11: ಬೆಳ್ತಂಗಡಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಬೆಳ್ತಂಗಡಿಯ ಪ್ರಭಾತ್ ಸ್ಟೋರ್ಸ್ ನ ಮಾಲಕ ಪ್ರಶಾಂತ್ ಭಟ್ ನಿಧನ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಜೀವ ಜಲ ಜಾಗೃತಿ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!