23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಳಂಜ: ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಇದರ ವತಿಯಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಉಜಿರೆ-ಧರ್ಮಸ್ಥಳ, ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು, ಶ್ರೀಮಾತಾ ನಾಲ್ಕೂರು, ಜ್ಯೋತಿ ಯುವತಿ ಮಂಡಲ ಬಳಂಜ, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇವರ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಜೂನ್ 15ರಿಂದ ಪ್ರಾರಂಭಗೊಂಡು 21ರ ವರೆಗೆ ಉಚಿತ ಯೋಗ ಶಿಬಿರವು ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನ ಬಳಂಜದಲ್ಲಿ ನಡೆಯಿತು.

ಕಳೆದೊಂದು ವಾರದಿಂದ ಯೋಗ ತರಭೇತಿಯನ್ನು ನೀಡುತ್ತಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಉಜಿರೆ-ಧರ್ಮಸ್ಥಳದ ಡಾ.ಅಭಿಷೇಕ್ ಮತ್ತು ಸುಶ್ಮಿತಾ ಶೆಟ್ಟಿಯವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್,
ಅಳದಂಗಡಿ ಪ್ರಾ.ಕೃ.ಪ.ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ಸಂಘದ ನಿಕಟಪೂರ್ವ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್,ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ,ಪ್ರಮುಖರಾದ ಕರುಣಾಕರ ಹೆಗ್ಡೆ ಬೊಕ್ಕಸ, ಸದಾನಂದ ಸಾಲಿಯಾನ್ ಬಳಂಜ, ಸತೀಶ್ ಕೆ ಬರಮೇಲು, ಸಂಘದ ನಿರ್ದೇಶಕ ರಂಜಿತ್ ಪೂಜಾರಿ,ಕಾರ್ಯದರ್ಶಿ ಜಗದೀಶ್ ಪೂಜಾರಿ,ಸೀತರಾಮ ಪೂಜಾರಿ ಮಜಲೋಡಿ, ಅನಸೂಯ, ನಾರಾಯಣ ಪೂಜಾರಿ, ಗೀರೀಶ್ ನಿಟ್ಟಡ್ಕ,ವಿಜಯ ಪೂಜಾರಿ, ಅನಿತಾ ಹೆಗ್ಡೆ,ಪುಷ್ಪಾವತಿ, ದಿನೇಶ್ ನಿಟ್ಟಡ್ಕ,ಅಚ್ಚುತ್ತಾ ಪೂಜಾರಿ, ವಿನಯ್ ಶೆಟ್ಟಿ, ಗಣೇಶ್ ದೇವಾಡಿಗ, ನಿತ್ಯಾನಂದ ಹೆಗ್ಡೆ, ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಸ್ವಾಗತಿಸಿ, ಎಲ್ಲರಿಗೂ ಕೃತಜ್ಞತೆ ಅರ್ಪಿಸಿದರು.

Related posts

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನ ಪ್ರಶಸ್ತಿಯ ಗೌರವ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯಿಂದ ಪುದುವೆಟ್ಟು ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya

ಲಾಯಿಲ: ವ್ಯಾಪಕ ಮಳೆಗೆ ಮನೆ ಕುಸಿತ

Suddi Udaya

ಎಕ್ಸೆಲ್ ಕಾಲೇಜು ಭರವಸೆಯ ಪ್ರತೀಕ, ಶಕ್ತಿಯ ಮೂಲ,ಭವಿಷ್ಯದ ಕೇಂದ್ರ ಶೈಕ್ಷಣಿಕ ಕ್ಷೇತ್ರದ ಅದ್ಬುತ ಯುವ ಸಾಧಕ ಸುಮಂತ್ ಕುಮಾರ್ ರವರ ಇಚ್ಚಾಶಕ್ತಿ ಮತ್ತು ಬದ್ಧತೆಯನ್ನು ಮೆಚ್ಚುವಂತದ್ದು ಎಕ್ಸೆಲ್ ಕಾಲೇಜಿನ ಶೈಕ್ಷಣಿಕ ಸಾಧನೆಯನ್ನು ಕೊಂಡಾಡಿದ ಖ್ಯಾತ ಚಿತ್ರನಟ ರಮೇಶ್ ಅರವಿಂದ್

Suddi Udaya

ಇಂದಬೆಟ್ಟು: ಮರಕ್ಕೆ ವಿದ್ಯುತ್ ತಂತಿ ತಾಗಿ ಬೆಂಕಿ: ದೇವನಾರಿ ತಂಡದ ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಬಾರಿ ದುರಂತ

Suddi Udaya

ವಿಶ್ವಹಿಂದೂ ಪರಿಷತ್ ಭಜರಂಗದಳ ವೇಣೂರು ಪ್ರಖಂಡದಿಂದ ವೇಣೂರು ಪೋಲೀಸ್ ಠಾಣೆಗೆ ದೂರು

Suddi Udaya
error: Content is protected !!