27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಬೆಳ್ತಂಗಡಿ, ಜೂನ್ 21: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಮತ್ತು 10 ದಿನಗಳ ಯೋಗ ತರಬೇತಿ ಶಿಬಿರ ಜೂ.21ರಂದು ಸಂಪನ್ನಗೊಂಡಿತು.

ಕಾರ್ಯಕ್ರಮದ ಮುಖ್ಯ ಅತಿಥಿ, ಎಸ್ ಡಿ ಎಂ ಪ್ರಕೃತಿ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ಎಂ.ಡಿ ವಿದ್ಯಾರ್ಥಿ ಡಾ. ಐಶ್ವರ್ಯ ಮಾತನಾಡಿ, ದಿನ ನಿತ್ಯದ ಒತ್ತಡ ನಿವಾರಣೆಗೆ ಯೋಗ ಸಹಕಾರಿಯಾಗಿದೆ. ಪ್ರತಿ ನಿತ್ಯ ಯೋಗಾಭ್ಯಾಸ ಮಾಡಿ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ನೀಡಿದ ಡಾ. ಐಶ್ವರ್ಯ ಇವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.  

ತರಬೇತಿ ಪಡೆದ 110 ವಿದ್ಯಾರ್ಥಿಗಳು ವಿವಿಧ ಯೋಗ ಆಸನಗಳನ್ನು ಪ್ರದರ್ಶಿಸಿದರು.

ಶಾಲಾ ಮುಖ್ಯ ಶಿಕ್ಷಕಿ ಹೇಮಲತಾ ಎಂ ಆರ್ ಮತ್ತು ದೈಹಿಕ ಶಿಕ್ಷಕ ಪ್ರವೀಣ್ ಕುಮಾರ್ ಅವರ ಮಾರ್ಗದರ್ಶನದಲ್ಲಿ, ಎಲ್ಲಾ ಶಿಕ್ಷಕರ ಸಹಕಾರದೊಂದಿಗೆ ಕಾರ್ಯಕ್ರಮ ಸಂಯೋಜಿಸಲಾಯಿತು. ಶಿಕ್ಷಕರಾದ ಮುರಳಿ ಸ್ವಾಗತಿಸಿ, ಮಂಜುನಾಥ್ ವಂದಿಸಿದರು. ಶಿಕ್ಷಕ ಶ್ರೇಯಾಂಸ್ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ತಣ್ಣೀರುಪಂತ ಗ್ರಾ.ಪಂ. ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ ಎಸ್‌ಯುವಿ ವಿಭಾಗದ ವಿಕ್ಟೋರಿಸ್ ಕಾರು ಬಿಡುಗಡೆ

Suddi Udaya

ಬರೆಂಗಾಯ ಶಾಲಾ ಅಮೃತ ಮಹೋತ್ಸವದ ಪೂರ್ವಭಾವಿ ಸಭೆ: ಅಮೃತ ಮಹೋತ್ಸವಕ್ಕೆ ಲಕ್ಷ್ಮಿ ದೇವಧರ್ ಮತ್ತು ಮಕ್ಕಳು ಮೊಳಂಪಾಯ ರಿಂದ ರೂ. 1 ಲಕ್ಷ ದೇಣಿಗೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ಘಟಕದಿಂದ ಸರ್ವ ಧರ್ಮ ಪ್ರಾರ್ಥನೆ

Suddi Udaya

ಡಿ.16: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಕೋರಿ ಜಾತ್ರೆ’

Suddi Udaya

ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಇದರ ವಿಸ್ತ್ರತ ಘಟಕ “ಅಗ್ರಿಲೀಫ್ 2.0” ಉದ್ಘಾಟನೆ

Suddi Udaya
error: Content is protected !!