22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಬೆಳ್ತಂಗಡಿ, ಜೂನ್ 21: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಮತ್ತು 10 ದಿನಗಳ ಯೋಗ ತರಬೇತಿ ಶಿಬಿರ ಜೂ.21ರಂದು ಸಂಪನ್ನಗೊಂಡಿತು.

ಕಾರ್ಯಕ್ರಮದ ಮುಖ್ಯ ಅತಿಥಿ, ಎಸ್ ಡಿ ಎಂ ಪ್ರಕೃತಿ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ಎಂ.ಡಿ ವಿದ್ಯಾರ್ಥಿ ಡಾ. ಐಶ್ವರ್ಯ ಮಾತನಾಡಿ, ದಿನ ನಿತ್ಯದ ಒತ್ತಡ ನಿವಾರಣೆಗೆ ಯೋಗ ಸಹಕಾರಿಯಾಗಿದೆ. ಪ್ರತಿ ನಿತ್ಯ ಯೋಗಾಭ್ಯಾಸ ಮಾಡಿ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ನೀಡಿದ ಡಾ. ಐಶ್ವರ್ಯ ಇವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.  

ತರಬೇತಿ ಪಡೆದ 110 ವಿದ್ಯಾರ್ಥಿಗಳು ವಿವಿಧ ಯೋಗ ಆಸನಗಳನ್ನು ಪ್ರದರ್ಶಿಸಿದರು.

ಶಾಲಾ ಮುಖ್ಯ ಶಿಕ್ಷಕಿ ಹೇಮಲತಾ ಎಂ ಆರ್ ಮತ್ತು ದೈಹಿಕ ಶಿಕ್ಷಕ ಪ್ರವೀಣ್ ಕುಮಾರ್ ಅವರ ಮಾರ್ಗದರ್ಶನದಲ್ಲಿ, ಎಲ್ಲಾ ಶಿಕ್ಷಕರ ಸಹಕಾರದೊಂದಿಗೆ ಕಾರ್ಯಕ್ರಮ ಸಂಯೋಜಿಸಲಾಯಿತು. ಶಿಕ್ಷಕರಾದ ಮುರಳಿ ಸ್ವಾಗತಿಸಿ, ಮಂಜುನಾಥ್ ವಂದಿಸಿದರು. ಶಿಕ್ಷಕ ಶ್ರೇಯಾಂಸ್ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ತೆಂಕಕಾರಂದೂರು: ಕೃಷಿಕ ಕೇಶವ ಪೂಜಾರಿ ನಿಧನ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ಇತ್ತೀಚೆಗೆ ನಿಧನರಾದ ಗಣೇಶ್ ಕಾಯರ್ತಡ್ಕ ರವರಿಗೆ ನುಡಿನಮನ

Suddi Udaya

ಬೆಳ್ತಂಗಡಿ ಕ್ಯಾಂಪ್ಕೋ ದಿಂದ ಸಹಾಯಧನ ಹಸ್ತಾಂತರ

Suddi Udaya

ಶಿಶಿಲ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ವಾರ್ಷಿಕ ಮಹೋತ್ಸವ

Suddi Udaya

ಮದುವೆ ಸಮಾರಂಭದಲ್ಲಿ ಮಾದರಿ ಕಾರ್ಯ ವರನ ತಂದೆ ಮುಳುಗು ತಜ್ಞ ರಿಗೆ ಬಂಧು ಮಿತ್ರರಿಂದ ಸನ್ಮಾನ: ತನ್ನ ಪ್ರಾಯ ಲೆಕ್ಕಿಸದೆ ಇನ್ನೊಬ್ಬರ ಪ್ರಾಣ ರಕ್ಷಿಸುವ ಬಂದಾರು ಮಹಮ್ಮದರ ಸೇವೆ ಅನುಕರಣೀಯ :ಕೆ. ಎಂ.ಮುಸ್ತಫ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕ್ರಿಟಿಕಲ್ ಫಂಡ್ ಚೆಕ್ ವಿತರಣೆ

Suddi Udaya
error: Content is protected !!