July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಉಜಿರೆ: ಶ್ರೀ ಧ. ಮಂ. ಶಿಕ್ಷಣ ಮಹಾವಿದ್ಯಾಲಯ ಉಜಿರೆ ಇಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಡಾ. ಪ್ರಣವ್ ಪಿ ಪಿ, ಅಸೋಸಿಯೇಟ್ ಪ್ರೊಫೆಸರ್, ಎಸ್.ಡಿ.ಎಂ. ಪ್ರಕೃತಿ ಮತ್ತು ಯೋಗ ಚಿಕಿತ್ಸಾ ಕಾಲೇಜು, ಉಜಿರೆ ಇವರು ಮಾತನಾಡಿ ? ಯೋಗವು ಮಾನವನ ಮಾನಸಿಕ, ದೈಹಿಕ, ನೈತಿಕ, ಆಧ್ಯಾತ್ಮಿಕ ಬೆಳವಣಿಗೆಗೆ ಸಹಕಾರಿಯಾಗಿದೆ. ಯೋಗವು ಆತ್ಮ ಸಂತೃಪ್ತಿ ಹಾಗೂ ಸಂತೋಷವನ್ನು ಹೆಚ್ಚಿಸುತ್ತದೆ. ಯೋಗವು ಮಗುವಿನ ಬೆಳವಣಿಗೆಗೆ ಹಾಗೂ ಮಾನಸಿಕ ಖಿನ್ನತೆಯಿಂದ ಹೊರಬರಲು ಸಹಕರಿಸುತ್ತದೆ ಎಂದು ಹೇಳಿದರು.


ಯೋಗವು ಎಲ್ಲಾ ರೀತಿಯ ಕಾಯಿಲೆಗಳಿಗೆ, ಉಸಿರಾಟ ಪ್ರಕ್ರಿಯೆಗೆ, ದೈಹಿಕ ಸಮತೋಲನ ಹಾಗೂ ಮಾನಸಿಕ ಉದ್ವೇಗ ನಿಯಂತ್ರಣಕ್ಕೆ ಬಹುಮುಖ್ಯವಾಗಿದೆ. ಯೋಗವು ಏಕಾಗ್ರತೆಯನ್ನು ವೃದ್ಧಿಸಲು, ಒತ್ತಡದಿಂದ ಹೊರಬರಲು, ಧ್ವನಿ ವೃದ್ಧಿಸಲು ಶಿಕ್ಷಕರಿಗೆ ಸಹಕರಿಸುತ್ತದೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಯೋಗವನ್ನು ಕಲಿಸಬೇಕು. ಪಠ್ಯಕ್ರಮದಲ್ಲಿ ಯೋಗವು ಸೇರಬೇಕು ಎಂದು ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಸಲ್ಡಾನ್ಹ ಅಭಿಪ್ರಾಯ ವ್ಯಕ್ತಪಡಿಸಿದರು.


ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ವಿದ್ಯಾಶ್ರೀ ಪಿ, ತಿರುಮಲೇಶ್ ರಾವ್ ಎನ್ ಕೆ, ಅನುಷಾ ಡಿ ಜೆ ಹಾಗೂ ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.


ಕಾರ್ಯಕ್ರಮವನ್ನು ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳಾದ ಸ್ವಾತಿ ಸ್ವಾಗತಿಸಿ, ಮಲ್ಲಿಕಾರ್ಜುನ ವಂದಿಸಿ, ಪ್ರತಿಮಾ ಕಾರ್ಯಕ್ರಮ ನಿರೂಪಿಸಿದರು.

Related posts

ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಸಿದ್ಧಶ್ರೀ ಪ್ರಶಸ್ತಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ

Suddi Udaya

ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಭಾರತದ ಟಾಪ್ 100 ಜ್ಯುವೆಲ್ಲರಿ ಪಟ್ಟಿಯಲ್ಲಿ ಪುತ್ತೂರಿನ “ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್” ಗೆ ಸ್ಥಾನ

Suddi Udaya

ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್ : ಹಳೆಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ

Suddi Udaya

ಡಿ. 29 ರಂದು ನಡೆಯಲಿರುವ ಬಳ್ಳಮಂಜ ಶೇಷ ನಾಗ ಜೋಡು ಕರೆ ಕಂಬಳದ ಪೂರ್ವ ಸಿದ್ಧತಾ ಸಭೆ

Suddi Udaya
error: Content is protected !!