30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ಪ್ರಶಿಕ್ಷಣ ಕಾರ್ಯಾಗಾರ

ಉಜಿರೆ: ವಿದ್ಯಾರ್ಥಿಗಳ ಸೃಜನಶೀಲತೆಯೊಂದಿಗೆ ಸಾಮಾಜಿಕ ಕಳಕಳಿಯ ಕಾರ್ಯಗಳಿಗೆ ಉತ್ತಮ ವೇದಿಕೆಯಾಗಿ ರಾಷ್ಟ್ರೀಯ ಸೇವಾ ಯೋಜನೆಯು ಕಾರ್ಯನಿರ್ವಹಿಸುತ್ತಿದೆ. ಸಮಾಜಮುಖಿ ಕಾರ್ಯಗಳ ಮೂಲಕ ವ್ಯಕ್ತಿತ್ವ ನಿರ್ಮಾಣ ಇದರಿಂದ ಸಾಧ್ಯ. ಸಮಾಜದಲ್ಲಿ ಉತ್ತಮರಾಗಿ ಹೊರಹೊಮ್ಮಲು ಮಾತ್ರವಲ್ಲದೆ ಪರಿಸರ ಕಾಳಜಿ, ವೈಯುಕ್ತಿಕ ಸ್ವಚ್ಛತೆ , ಆತ್ಮವಿಶ್ವಾಸ ಬೆಳೆಸಿಕೊಳ್ಳಲು ರಾ. ಸೇ. ಯೋಜನೆ ಸಹಾಯಕವಾಗಿದೆ. ಒಟ್ಟಾರೆ ಸಾಮಾಜಿಕ ಸಾಮರಸ್ಯ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಿಗೆ ಇದು ಬುನಾದಿಯಾಗಿದೆ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕ ಹಾಗೂ ರಾ.ಸೇ.ಯೋಜನೆಯ ಪೂರ್ವ ಯೋಜನಾಧಿಕಾರಿ ಅವನೀಶ್. ಪಿ. ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ನಡೆದ ಪ್ರಶಿಕ್ಷಣ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಸ್ವಯಂ ಸೇವಕರು ರಚಿಸಿದ ಭಿತ್ತಿಪತ್ತಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಗೌರವಿಸಿದರು. ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ , ನಾಯಕರಾದ ಆದಿತ್ಯ ಹಾಗೂ ಪ್ರಾಪ್ತಿ ಉಪಸ್ಥಿತರಿದ್ದರು.

ಶಶಾಂಕ್ ಸ್ವಾಗತಿಸಿ , ಅಪರ್ಣಾ ವಂದಿಸಿದರು. ಹರ್ಷಿತಾ ನಿರೂಪಿಸಿದರು.

Related posts

ಅಳದಂಗಡಿಯಲ್ಲಿ ಲೋಕೋಪಯೋಗಿ ಇಲಾಖೆಯವರು ಅಳವಡಿಸಿದ ನಾಮಫಲಕದಲ್ಲಿ ಗೊಂದಲ

Suddi Udaya

ಮಡಂತ್ಯಾರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಪಾರೆಂಕಿ ಶ್ರೀ ಮಹಿಷಾಮರ್ದಿನಿ ದೇವಸ್ಥಾನದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಜೈನ್ ಮೊಬೈಲ್ ಮತ್ತು ನ್ಯೂ ಜೈನ್ ಮೊಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ದರ ಕಡಿತ ಮಾರಾಟ: ಪ್ರತಿ ಖರೀದಿಗೂ ಪಡೆಯಿರಿ ಕೂಪನ್ ಹಾಗೂ ಅಧಿಕ ಬಹುಮಾನಗಳು

Suddi Udaya

ಕೊಯ್ಯೂರು ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆ, ಏರ್ ಟೆಲ್ ಸಂಸ್ಥೆಯ ಗಮನಕ್ಕೆ ತಂದರೂ ನಿರ್ಲಕ್ಷ್ಯ ಧೋರಣೆ: ಸಮಸ್ಯೆ ಬಗೆಹರಿಸುವಂತೆ ಸಾರ್ವಜನಿಕರ ಪರವಾಗಿ ಅಶೋಕ್ ಪೂಜಾರಿ ಬಜಿಲ ಒತ್ತಾಯ

Suddi Udaya

ಕಳಿಯ ಗ್ರಾಮ ಸಾಮಾಜಿಕ ಲೆಕ್ಕ ಪರಿಶೋಧನೆ ಸಭೆ

Suddi Udaya

ತಾಲೂಕಿನ ಬಡ ಮುಸ್ಲಿಂರನ್ನು ಅಜ್ಮೀರ್‌ಗೆ ಕಳುಹಿಸುವ ಪಿತೂರಿ: ಮತದಾರರು ಜಾಗೃತರಾಗಬೇಕು: ಸಲೀಂ ಗುರುವಾಯನಕರೆ

Suddi Udaya
error: Content is protected !!