July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ಪ್ರಶಿಕ್ಷಣ ಕಾರ್ಯಾಗಾರ

ಉಜಿರೆ: ವಿದ್ಯಾರ್ಥಿಗಳ ಸೃಜನಶೀಲತೆಯೊಂದಿಗೆ ಸಾಮಾಜಿಕ ಕಳಕಳಿಯ ಕಾರ್ಯಗಳಿಗೆ ಉತ್ತಮ ವೇದಿಕೆಯಾಗಿ ರಾಷ್ಟ್ರೀಯ ಸೇವಾ ಯೋಜನೆಯು ಕಾರ್ಯನಿರ್ವಹಿಸುತ್ತಿದೆ. ಸಮಾಜಮುಖಿ ಕಾರ್ಯಗಳ ಮೂಲಕ ವ್ಯಕ್ತಿತ್ವ ನಿರ್ಮಾಣ ಇದರಿಂದ ಸಾಧ್ಯ. ಸಮಾಜದಲ್ಲಿ ಉತ್ತಮರಾಗಿ ಹೊರಹೊಮ್ಮಲು ಮಾತ್ರವಲ್ಲದೆ ಪರಿಸರ ಕಾಳಜಿ, ವೈಯುಕ್ತಿಕ ಸ್ವಚ್ಛತೆ , ಆತ್ಮವಿಶ್ವಾಸ ಬೆಳೆಸಿಕೊಳ್ಳಲು ರಾ. ಸೇ. ಯೋಜನೆ ಸಹಾಯಕವಾಗಿದೆ. ಒಟ್ಟಾರೆ ಸಾಮಾಜಿಕ ಸಾಮರಸ್ಯ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಿಗೆ ಇದು ಬುನಾದಿಯಾಗಿದೆ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕ ಹಾಗೂ ರಾ.ಸೇ.ಯೋಜನೆಯ ಪೂರ್ವ ಯೋಜನಾಧಿಕಾರಿ ಅವನೀಶ್. ಪಿ. ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ನಡೆದ ಪ್ರಶಿಕ್ಷಣ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಸ್ವಯಂ ಸೇವಕರು ರಚಿಸಿದ ಭಿತ್ತಿಪತ್ತಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಗೌರವಿಸಿದರು. ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ , ನಾಯಕರಾದ ಆದಿತ್ಯ ಹಾಗೂ ಪ್ರಾಪ್ತಿ ಉಪಸ್ಥಿತರಿದ್ದರು.

ಶಶಾಂಕ್ ಸ್ವಾಗತಿಸಿ , ಅಪರ್ಣಾ ವಂದಿಸಿದರು. ಹರ್ಷಿತಾ ನಿರೂಪಿಸಿದರು.

Related posts

ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ನಿಧನ

Suddi Udaya

ಗೇರುಕಟ್ಟೆ ಶ್ರೀ ಪತಂಜಲಿ ಯೋಗ ಶಿಬಿರದ ಪ್ರಥಮ ವಾರ್ಷಿಕೋತ್ಸವ

Suddi Udaya

ಧರ್ಮಸ್ಥಳ ಮಂಜುಷಾ ವಸ್ತು ಸಂಗ್ರಹಾಲಯದಲ್ಲಿ ಶತಮಾನದ ಅದ್ಭುತ ದಂತದ ಶಿಲ್ಪಕಲೆ ಮತ್ತು ಕಲಾಕೃತಿಗಳ ಗ್ಯಾಲರಿಯ ಉದ್ಘಾಟನೆ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ ಸರಸ್ವತಿ ಹಿ.ಪ್ರಾ. ಶಾಲಾ ಮುಂಭಾಗದಲ್ಲಿ ಬ್ಯಾರಿಕೆಡ್ ಅಳವಡಿಕೆ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಸ್ವಚ್ಛತಾ ದಿನ: ಗಾಂಧಿ ಜಯಂತಿಗೆ ಅರಣ್ಯ ಇಲಾಖೆಯ ಅರ್ಥಪೂರ್ಣ ಗೌರವ

Suddi Udaya

ಸುಲ್ಕೇರಿ ಗ್ರಾ. ಪಂ. ವ್ಯಾಪ್ತಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!