ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ಪ್ರಶಿಕ್ಷಣ ಕಾರ್ಯಾಗಾರ

ಉಜಿರೆ: ವಿದ್ಯಾರ್ಥಿಗಳ ಸೃಜನಶೀಲತೆಯೊಂದಿಗೆ ಸಾಮಾಜಿಕ ಕಳಕಳಿಯ ಕಾರ್ಯಗಳಿಗೆ ಉತ್ತಮ ವೇದಿಕೆಯಾಗಿ ರಾಷ್ಟ್ರೀಯ ಸೇವಾ ಯೋಜನೆಯು ಕಾರ್ಯನಿರ್ವಹಿಸುತ್ತಿದೆ. ಸಮಾಜಮುಖಿ ಕಾರ್ಯಗಳ ಮೂಲಕ ವ್ಯಕ್ತಿತ್ವ ನಿರ್ಮಾಣ ಇದರಿಂದ ಸಾಧ್ಯ. ಸಮಾಜದಲ್ಲಿ ಉತ್ತಮರಾಗಿ ಹೊರಹೊಮ್ಮಲು ಮಾತ್ರವಲ್ಲದೆ ಪರಿಸರ ಕಾಳಜಿ, ವೈಯುಕ್ತಿಕ ಸ್ವಚ್ಛತೆ , ಆತ್ಮವಿಶ್ವಾಸ ಬೆಳೆಸಿಕೊಳ್ಳಲು ರಾ. ಸೇ. ಯೋಜನೆ ಸಹಾಯಕವಾಗಿದೆ. ಒಟ್ಟಾರೆ ಸಾಮಾಜಿಕ ಸಾಮರಸ್ಯ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಿಗೆ ಇದು ಬುನಾದಿಯಾಗಿದೆ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕ ಹಾಗೂ ರಾ.ಸೇ.ಯೋಜನೆಯ ಪೂರ್ವ ಯೋಜನಾಧಿಕಾರಿ ಅವನೀಶ್. ಪಿ. ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ನಡೆದ ಪ್ರಶಿಕ್ಷಣ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಸ್ವಯಂ ಸೇವಕರು ರಚಿಸಿದ ಭಿತ್ತಿಪತ್ತಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಗೌರವಿಸಿದರು. ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ , ನಾಯಕರಾದ ಆದಿತ್ಯ ಹಾಗೂ ಪ್ರಾಪ್ತಿ ಉಪಸ್ಥಿತರಿದ್ದರು.

ಶಶಾಂಕ್ ಸ್ವಾಗತಿಸಿ , ಅಪರ್ಣಾ ವಂದಿಸಿದರು. ಹರ್ಷಿತಾ ನಿರೂಪಿಸಿದರು.

Related posts

ಯಕ್ಷಗಾನ ಕಲಾವಿದನ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಪ್ರಕರಣ: ಮಹೇಶ್‌ ಶೆಟ್ಟಿ ತಿಮರೋಡಿಗೆ ಷರತ್ತು ಬದ್ಧ ನಿರೀಕ್ಷಣಾ ಜಾಮೀನು

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳ ಭೇಟಿ

Suddi Udaya

ಮಿತ್ತಬಾಗಿಲು: ಕೊಳಂಬೆ ನಿವಾಸಿ ವಿದ್ಯಾ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಚಪ್ಪರ ಮೂಹೂರ್ತ

Suddi Udaya

ಬೆಳ್ತಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಗಮಕ ವಾಚನ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!