September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಣಿತ ಭಜನಾ ತರಬೇತಿಗೆ ನೂತನ ಸದಸ್ಯರುಗಳ ಸೇರ್ಪಡೆ ಕಾರ್ಯಕ್ರಮ

ಗುರುವಾಯನಕೆರೆ : ಶ್ರೀ ಭ್ರಾಮರಿ ಭಜನಾ ಮಂಡಳಿ ಗುರುವಾಯನಕೆರೆ ಇಲ್ಲಿ ನಡೆಯುತ್ತಿರುವ ಕುಣಿತ ಭಜನಾ ತರಬೇತಿಗೆ ನೂತನ ಸದಸ್ಯರುಗಳ ಸೇರ್ಪಡೆಯ ಕಾರ್ಯಕ್ರಮವು ಇಲ್ಲಿಯ ನಮ್ಮ‌ ಮನೆ ಹವ್ಯಕ ಭವನದಲ್ಲಿ ಕುಣಿತ ಭಜನಾ ತರಬೇತಿ ಪಡೆಯಲಿಚ್ಚಿಸುವ ಮಕ್ಕಳ ಪೋಷಕರ ಪಾಲ್ಗೊಳ್ಳುವಿಕೆಯೊಂದಿಗೆ ನಡೆಯಿತು.


ಸಭೆಯ ಉದ್ಘ್ಹಾಟನೆಯನ್ನು ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ಇವರು ಉದ್ಘಾಟಿಸಿ ನಾವು ಕಲಿಸುತ್ತಿರುವ ಹಾಗೂ ಕಲಿಯುತ್ತಿರುವ ಭಜನೆಯು ನಮ್ಮ ಧಾರ್ಮಿಕ ಪರಂಪರೆಗೆ ಚ್ಯುತಿ ಬಾರದಂತೆ ಶ್ರದ್ಧಾ ಭಕ್ತಿಯಿಂದ ನಡೆಯುವಂತಾಗಲೆಂದು ಕಾರ್ಯಕ್ರಮಕ್ಕೆ ಶುಭ ಹಾರೈಸುತ್ತ ಭಜನೆಯಲ್ಲಿ ಮಕ್ಕಳ ಪಾಲ್ಗೊಳ್ವಿಕೆಯ ಮಹತ್ವದ ಬಗ್ಗೆ ಪೋಷಕರಿಗೆ ಮಾರ್ಗದರ್ಶನ ಮಾಡಿದರು.


ಕಾರ್ಯಕ್ರಮದ ಅಧ್ಯಕ್ಷರು ಹಾಗೂ ಕುಣಿತ ಭಜನೆಯ ತರಬೇತುದಾರರು ಭಜನೆಯಿಂದ ವಿಭಜನೆ ಇಲ್ಲ ಎನ್ನುವುದರ ಬಗ್ಗೆ ಸವಿಸ್ತಾರವಾದ ಮಾಹಿತಿಗಳನ್ನು ನೀಡಿದರು.
ಈ‌ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಭ್ರಾಮರಿ ಭಜನಾ ಮಂಡಳಿಯ ಅಧ್ಯಕ್ಷ ರಮೇಶ್ ಬಂಗೇರ ಓಟ್ಲರವರು ವಹಿಸಿದ್ದರು.


ಭಜನಾ ತರಬೇತುದಾರರು ಹಾಗೂ ತಾಲೂಕು ಕುಣಿತ ಭಜನೆಯ ತರಬೇತಿದಾರರ ಸಂಘದ ನೂತನ ಅಧ್ಯಕ್ಷ ಸಂದೇಶ್‌ ಮದ್ದಡ್ಕ ಹಾಗೂ ಭಜನಾ ಮಂಡಳಿಯ ಕಾರ್ಯದರ್ಶಿಯವರಾದ ಸುಮಿತ್ರಾ ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಪ್ರಾರಂಭದಲ್ಲಿ ಕು| ರಕ್ಷಾ ಸ್ವಾಗತಿಸಿ, ಕು| ವೀಕ್ಷಿತಾ ವಂದಿಸಿದರು. ಕಾರ್ಯಕ್ರಮದಲ್ಲಿ ಕುಣಿತ ಭಜನೆ ತರಬೇತಿ ಪಡೆಯುವ ವಿಧ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ಹೊಸಂಗಡಿ : ಪ್ರಗತಿಪರ ಕೃಷಿಕ ರಾಮಪ್ಪ ಪೂಜಾರಿ ನಿಧನ

Suddi Udaya

ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅಭಿವೃದ್ಧಿ ಹೆಸರಲ್ಲಿ ದೂಳು ತಿನ್ನಿಸಬೇಡಿ, ರಸ್ತೆ ಅಗಲೀಕರಣ ಜನಸ್ನೇಹಿಯಾಗಿರಲಿ, ರಸ್ತೆ ಬೇಕು ದೂಳು ಬೇಡ ನಾಮಫಲಕ ಅಳವಡಿಕೆ:

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಾಗೂ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಪಡಂಗಡಿ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಲಾರಿ

Suddi Udaya

ನಾವೂರು ಗ್ರಾ.ಪಂ ನೂತನ ಕಟ್ಟಡ ಪ್ರಜಾ ಸೌಧ ಹಾಗೂ ವಿವಿಧ ಕಾಮಗಾರಿಗಳ ಶಿಲಾನ್ಯಾಸ -ಉದ್ಘಾಟನೆ

Suddi Udaya

ಬಂದಾರಿನಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ: ಕೃಷಿ ಹಾನಿ

Suddi Udaya
error: Content is protected !!