23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಣಿತ ಭಜನಾ ತರಬೇತಿಗೆ ನೂತನ ಸದಸ್ಯರುಗಳ ಸೇರ್ಪಡೆ ಕಾರ್ಯಕ್ರಮ

ಗುರುವಾಯನಕೆರೆ : ಶ್ರೀ ಭ್ರಾಮರಿ ಭಜನಾ ಮಂಡಳಿ ಗುರುವಾಯನಕೆರೆ ಇಲ್ಲಿ ನಡೆಯುತ್ತಿರುವ ಕುಣಿತ ಭಜನಾ ತರಬೇತಿಗೆ ನೂತನ ಸದಸ್ಯರುಗಳ ಸೇರ್ಪಡೆಯ ಕಾರ್ಯಕ್ರಮವು ಇಲ್ಲಿಯ ನಮ್ಮ‌ ಮನೆ ಹವ್ಯಕ ಭವನದಲ್ಲಿ ಕುಣಿತ ಭಜನಾ ತರಬೇತಿ ಪಡೆಯಲಿಚ್ಚಿಸುವ ಮಕ್ಕಳ ಪೋಷಕರ ಪಾಲ್ಗೊಳ್ಳುವಿಕೆಯೊಂದಿಗೆ ನಡೆಯಿತು.


ಸಭೆಯ ಉದ್ಘ್ಹಾಟನೆಯನ್ನು ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ಇವರು ಉದ್ಘಾಟಿಸಿ ನಾವು ಕಲಿಸುತ್ತಿರುವ ಹಾಗೂ ಕಲಿಯುತ್ತಿರುವ ಭಜನೆಯು ನಮ್ಮ ಧಾರ್ಮಿಕ ಪರಂಪರೆಗೆ ಚ್ಯುತಿ ಬಾರದಂತೆ ಶ್ರದ್ಧಾ ಭಕ್ತಿಯಿಂದ ನಡೆಯುವಂತಾಗಲೆಂದು ಕಾರ್ಯಕ್ರಮಕ್ಕೆ ಶುಭ ಹಾರೈಸುತ್ತ ಭಜನೆಯಲ್ಲಿ ಮಕ್ಕಳ ಪಾಲ್ಗೊಳ್ವಿಕೆಯ ಮಹತ್ವದ ಬಗ್ಗೆ ಪೋಷಕರಿಗೆ ಮಾರ್ಗದರ್ಶನ ಮಾಡಿದರು.


ಕಾರ್ಯಕ್ರಮದ ಅಧ್ಯಕ್ಷರು ಹಾಗೂ ಕುಣಿತ ಭಜನೆಯ ತರಬೇತುದಾರರು ಭಜನೆಯಿಂದ ವಿಭಜನೆ ಇಲ್ಲ ಎನ್ನುವುದರ ಬಗ್ಗೆ ಸವಿಸ್ತಾರವಾದ ಮಾಹಿತಿಗಳನ್ನು ನೀಡಿದರು.
ಈ‌ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಭ್ರಾಮರಿ ಭಜನಾ ಮಂಡಳಿಯ ಅಧ್ಯಕ್ಷ ರಮೇಶ್ ಬಂಗೇರ ಓಟ್ಲರವರು ವಹಿಸಿದ್ದರು.


ಭಜನಾ ತರಬೇತುದಾರರು ಹಾಗೂ ತಾಲೂಕು ಕುಣಿತ ಭಜನೆಯ ತರಬೇತಿದಾರರ ಸಂಘದ ನೂತನ ಅಧ್ಯಕ್ಷ ಸಂದೇಶ್‌ ಮದ್ದಡ್ಕ ಹಾಗೂ ಭಜನಾ ಮಂಡಳಿಯ ಕಾರ್ಯದರ್ಶಿಯವರಾದ ಸುಮಿತ್ರಾ ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಪ್ರಾರಂಭದಲ್ಲಿ ಕು| ರಕ್ಷಾ ಸ್ವಾಗತಿಸಿ, ಕು| ವೀಕ್ಷಿತಾ ವಂದಿಸಿದರು. ಕಾರ್ಯಕ್ರಮದಲ್ಲಿ ಕುಣಿತ ಭಜನೆ ತರಬೇತಿ ಪಡೆಯುವ ವಿಧ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮನ್ ಶರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕೆ ಆಯ್ಕೆ

Suddi Udaya

ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಖಂಡಿಗ ನಿವಾಸಿ ವಾಸಪ್ಪ ಗೌಡರಿಗೆ ಚಿಕಿತ್ಸಾ ನೆರವು

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಧರ್ಮಸ್ಥಳದ ಆಕರ್ಷ್‌ ರಾಜ್ಯಕ್ಕೆ ಐದನೇ ಸ್ಥಾನ

Suddi Udaya

ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ರಿಗೆ ಗುಂಪಲಾಜೆ ಶ್ರೀ ನಾಗ ರಕ್ತೇಶ್ವರಿ ಸೇವಾ ಟ್ರಸ್ಟ್ ವತಿಯಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ : ಮಹಿಳಾ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ನಮಿತಾ ಪೂಜಾರಿ ರವರಿಗೆ ಅಭಿನಂದನೆ

Suddi Udaya

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ನೂತನ ಕಚೇರಿ ಉದ್ಘಾಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!