July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಣಿತ ಭಜನಾ ತರಬೇತಿಗೆ ನೂತನ ಸದಸ್ಯರುಗಳ ಸೇರ್ಪಡೆ ಕಾರ್ಯಕ್ರಮ

ಗುರುವಾಯನಕೆರೆ : ಶ್ರೀ ಭ್ರಾಮರಿ ಭಜನಾ ಮಂಡಳಿ ಗುರುವಾಯನಕೆರೆ ಇಲ್ಲಿ ನಡೆಯುತ್ತಿರುವ ಕುಣಿತ ಭಜನಾ ತರಬೇತಿಗೆ ನೂತನ ಸದಸ್ಯರುಗಳ ಸೇರ್ಪಡೆಯ ಕಾರ್ಯಕ್ರಮವು ಇಲ್ಲಿಯ ನಮ್ಮ‌ ಮನೆ ಹವ್ಯಕ ಭವನದಲ್ಲಿ ಕುಣಿತ ಭಜನಾ ತರಬೇತಿ ಪಡೆಯಲಿಚ್ಚಿಸುವ ಮಕ್ಕಳ ಪೋಷಕರ ಪಾಲ್ಗೊಳ್ಳುವಿಕೆಯೊಂದಿಗೆ ನಡೆಯಿತು.


ಸಭೆಯ ಉದ್ಘ್ಹಾಟನೆಯನ್ನು ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ಇವರು ಉದ್ಘಾಟಿಸಿ ನಾವು ಕಲಿಸುತ್ತಿರುವ ಹಾಗೂ ಕಲಿಯುತ್ತಿರುವ ಭಜನೆಯು ನಮ್ಮ ಧಾರ್ಮಿಕ ಪರಂಪರೆಗೆ ಚ್ಯುತಿ ಬಾರದಂತೆ ಶ್ರದ್ಧಾ ಭಕ್ತಿಯಿಂದ ನಡೆಯುವಂತಾಗಲೆಂದು ಕಾರ್ಯಕ್ರಮಕ್ಕೆ ಶುಭ ಹಾರೈಸುತ್ತ ಭಜನೆಯಲ್ಲಿ ಮಕ್ಕಳ ಪಾಲ್ಗೊಳ್ವಿಕೆಯ ಮಹತ್ವದ ಬಗ್ಗೆ ಪೋಷಕರಿಗೆ ಮಾರ್ಗದರ್ಶನ ಮಾಡಿದರು.


ಕಾರ್ಯಕ್ರಮದ ಅಧ್ಯಕ್ಷರು ಹಾಗೂ ಕುಣಿತ ಭಜನೆಯ ತರಬೇತುದಾರರು ಭಜನೆಯಿಂದ ವಿಭಜನೆ ಇಲ್ಲ ಎನ್ನುವುದರ ಬಗ್ಗೆ ಸವಿಸ್ತಾರವಾದ ಮಾಹಿತಿಗಳನ್ನು ನೀಡಿದರು.
ಈ‌ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಭ್ರಾಮರಿ ಭಜನಾ ಮಂಡಳಿಯ ಅಧ್ಯಕ್ಷ ರಮೇಶ್ ಬಂಗೇರ ಓಟ್ಲರವರು ವಹಿಸಿದ್ದರು.


ಭಜನಾ ತರಬೇತುದಾರರು ಹಾಗೂ ತಾಲೂಕು ಕುಣಿತ ಭಜನೆಯ ತರಬೇತಿದಾರರ ಸಂಘದ ನೂತನ ಅಧ್ಯಕ್ಷ ಸಂದೇಶ್‌ ಮದ್ದಡ್ಕ ಹಾಗೂ ಭಜನಾ ಮಂಡಳಿಯ ಕಾರ್ಯದರ್ಶಿಯವರಾದ ಸುಮಿತ್ರಾ ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಪ್ರಾರಂಭದಲ್ಲಿ ಕು| ರಕ್ಷಾ ಸ್ವಾಗತಿಸಿ, ಕು| ವೀಕ್ಷಿತಾ ವಂದಿಸಿದರು. ಕಾರ್ಯಕ್ರಮದಲ್ಲಿ ಕುಣಿತ ಭಜನೆ ತರಬೇತಿ ಪಡೆಯುವ ವಿಧ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ಕೊಕ್ಕಡ ಗ್ರಾ.ಪಂ. ನಲ್ಲಿ ಉದ್ಯೋಗಕಾತರಿ ಯೋಜನೆಯಡಿ ಆರೋಗ್ಯ ತಪಾಸಣಾ ಶಿಬಿರ

Suddi Udaya

ಅಳದಂಗಡಿ: ಲೋಕೋಪಯೋಗಿ ಇಲಾಖೆಯಲ್ಲಿ 38 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಶಿವಪ್ರಸಾದ್ ಅಜಿಲ ದಂಪತಿಗೆ ಊರವರಿಂದ ಪೌರ ಸನ್ಮಾನ, ಷಷ್ಠ್ಯಬ್ಧ ಸಂಭ್ರಮ, ಸಾವಿರಾರು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಸುಲ್ಕೇರಿ: ಅನುದಾನಿತ ಖಾಸಗಿ ಹಿ.ಪ್ರಾ. ಹಾಗೂ ಶ್ರೀರಾಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಜು. 15: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಚಾರ್ಮಾಡಿ ಹಾಗೂ ಮಿತ್ತಬಾಗಿಲು ಗ್ರಾ.ಪಂ.ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಬಳಂಜ ಗ್ರಾ.ಪಂ. ನ ಅಭಿವೃದ್ಧಿಯ ಓಟಕ್ಕೆ ಒಲಿದ ಪ್ರತಿಷ್ಠಿತ ಗಾಂಧಿ ಪುರಸ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್,ಸಚಿವ ಪ್ರಿಯಾಂಕ್ ಖರ್ಗೆರವರಿಂದ ಪ್ರಶಸ್ತಿ ಪ್ರದಾನ

Suddi Udaya
error: Content is protected !!