July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟ ಗಾಯಕ್ಕೊಳಗಾಗಿದ್ದ ನೇಪಾಳಿ ಮಹಿಳೆ ಸಾವು

ಕೊಕ್ಕಡ: ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟ ಗಾಯಕ್ಕೊಳಗಾಗಿದ್ದ ನೇಪಾಳಿ ಮೂಲದ ಮಹಿಳೆಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಕೊಕ್ಕಡದಲ್ಲಿ ನಡೆದಿದೆ.


ಮೂಲತ: ನೇಪಾಳಿಯಾಗಿದ್ದು ಕೊಕ್ಕಡ ಗ್ರಾಮದ ಮುಂಡೂರುಪಳಿಕೆ ಶಾಲೆಯ ಬಳಿ ವಾಸವಾಗಿದ್ದ ಚಕ್ರ ಬಹದ್ದೂರು ಮಲ್ಲ ಎಂಬವರ ಪತ್ನಿ ಬಸಂತಿದೇವಿ(44ವ.) ಮೃತಪಟ್ಟವರು. ಇವರು ಜೂ.11ರಂದು ಸಂಜೆ ಅಡುಗೆ ಮಾಡುವ ಸಲುವಾಗಿ ಸೌದೆ ಉರಿಸಲು ಮನೆಯಲ್ಲಿ ತೋಟದ ಕೆಲಸಕ್ಕೆ ತಂದಿಟ್ಟಿದ್ದ ಪೆಟ್ರೋಲ್ ಬಳಸಿದಾಗ ಆಕಸ್ಮಿಕವಾಗಿ ಒಮ್ಮೆಲೇ ಬೆಂಕಿಯು ಬಸಂತಿದೇವಿ ಧರಿಸಿದ್ದ ಬಟ್ಟೆಗೆ ತಗಲಿ ಮೈಯೆಲ್ಲ ತೀವ್ರ ತರದ ಸುಟ್ಟಗಾಯ ಉಂಟಾಗಿತ್ತು. ಅವರನ್ನು ಉಡುಪಿಯ ಆದರ್ಶ ಆಸ್ಪತ್ರೆಯ ತೀವ್ರ ನಿಗಾ ವಿಭಾಗದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಜೂ.18ರಂದು ಸಂಜೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ಚಕ್ರ ಬಹದ್ದೂರು ಅವರು ನೀಡಿರುವ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ ಜಮ್ಮೀಯತುಲ್‌ ಫಲಾಹ್ ಘಟಕದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜನಮಂಗಲ ಕಾರ್ಯಕ್ರಮ: ರಾಜ್ಯದ 6374 ವಿಶೇಷ ಚೇತನರಿಗೆ ಉಚಿತ ಸಲಕರಣೆ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠದ ರಿಕ್ಷಾ ಕೊಡುಗೆ

Suddi Udaya

ರೂ.2.25 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಸುಸಜ್ಜಿತ ಪ್ರೌಢಶಾಲಾ ಕಟ್ಟಡ ಸಿಂಧೂರ: ಜೂ. 20 ರಂದು ಲೋಕಾರ್ಪಣೆಗೊಳ್ಳಲಿದೆಪತ್ರಿಕಾಗೋಷ್ಠಿಯಲ್ಲಿ ಅನಂತ ಭಟ್ ಮಚ್ಚಿಮಲೆ ಹೇಳಿಕೆ

Suddi Udaya

ಉಜಿರೆ ಪ್ರಾ.ಕೃ.ಪ. ಸಹಕಾರಿ ಸೇವಾ ಸಂಘದ ನೂತನ ಕಟ್ಟಡ “ಉತ್ಥಾನ” ಲೋಕಾರ್ಪಣೆ: ಸಮಾರೋಪ ಸಮಾರಂಭ:ಜೋಡು ಜೀಟಿಗೆ ತುಳು ನಾಟಕ ಪ್ರದರ್ಶನ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಎಸ್.ಎಸ್.ಎಲ್.ಸಿ ಉತ್ತಮ ಅಂಕ ಪಡೆದ ಬೆಳ್ತಂಗಡಿ ವಿದ್ಯಾರ್ಥಿ ಸಿಮ್ರಾ ಪರ್ವೀನ್ ಳಿಗೆ ಸನ್ಮಾನ

Suddi Udaya
error: Content is protected !!