23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ವಾಣಿಜ್ಯ ಕಟ್ಟಡ ಉನ್ನತಿ ಇದರ ಉದ್ಘಾಟನಾ ಸಮಾರಂಭವು ಜೂ.21 ರಂದು ಧರ್ಮಸ್ಥಳ ಕಲ್ಲೇರಿ ಸಂಘದ ವಠಾರ ನಡೆಯಿತು.

ನೂತನ ಕಟ್ಟಡದ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜ್ಯಸಭಾ ಸದಸ್ಯರಾದ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ನೆರವೇರಿಸಿ ಮಾತನಾಡಿ ಸಹಕಾರಿ ರಂಗ ಗಟ್ಟಿಯಾಗಬೇಕು ಮತ್ತು ಬಲಿಷ್ಠವಾಗಬೇಕು.ಧರ್ಮಸ್ಥಳ ಕ್ಷೇತ್ರದಲ್ಲಿರುವ ಸಂಸ್ಥೆ ಒಳ್ಳೆಯ ರೀತಿಯಲ್ಲಿ ನಡೆದು ಸರ್ವಾಂಗೀಣ ಪ್ರಗತಿ ಸಾಗಿಸಿದೆ.ಸಹಕಾರಿ ರಂಗ ಮತ್ತು ಧರ್ಮಸ್ಥಳದ ಸ್ವಸಹಾಯ ಸಂಘಗಳು ಜೊತೆ ಜೊತೆಯಾಗಿ ನಡೆಯುತ್ತಿದೆ ಎಂದರು.

ರೈತ ಸಭಾ ಭವನ ಹಾಗೂ ಊಟದ ಸಭಾಂಗಣ ಉದ್ಘಾಟನೆಯನ್ನು ರಾಜ್ಯ ಸಹಕಾರ ಮಾರಾಟ ಮಹಾ ಮಂಡಲ ಬೆಂಗಳೂರು ಅಧ್ಯಕ್ಷ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಅಧ್ಯಕ್ಷ ಡಾ| ಎಂ. ಎನ್. ರಾಜೇಂದ್ರ ಕುಮಾರ್ ನೆರವೇರಿಸಿದರು..

ಅಧ್ಯಕ್ಷತೆಯನ್ನು ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರೀತಮ್ ಡಿ. ವಹಿಸಿದರು.

ಮುಖ್ಯ ಅಥಿತಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ,ವಿಧಾನಪರಿಷತ್ ಸದಸ್ಯರಾದ ಕೆ. ಪ್ರತಾಪಸಿಂಹ ನಾಯಕ್, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ,ಬೆಳ್ತಂಗಡಿ ಸಹಕಾರ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಬಿ ವಿ ಪ್ರತೀಮಾ, ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಮಲ,ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಸಿ ಎ ಬ್ಯಾಂಕ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಎನ್. ಸತೀಶ್ ಹೊಳ್ಳ ,ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್,ನಿರ್ದೇಶಕರಾದ ಶಾಂಭವಿ ರೈ,ನೀಲಾಧರ ಶೆಟ್ಟಿ, ಶೀನ,ಚಂದ್ರಶೇಖರ,ಉಮಾನಾಥ,ಪ್ರಭಾಕರ ಗೌಡ ಬೊಳ್ಮ,ವಿಕ್ರಮ್,ಧನಲಕ್ಷ್ಮಿ,ಪ್ರಸನ್ನ ಹೆಬ್ಬಾರ್,ತಂಗಚ್ಚನ್ ಎನ್.ಪಿ,ಡಿ.ಸಿ.ಸಿ ಪ್ರತಿನಿಧಿ ಸುದರ್ಶನ್ ಉಪಸ್ಥಿತರಿದ್ದರು.

ಪ್ರಾಪ್ತಿ ಶೆಟ್ಟಿ, ವಂಶಿಕ ಇವರು ಪ್ರಾರ್ಥಿಸಿದರು. ಕಟ್ಟಡ ಸಮಿತಿ‌ ಸದಸ್ಯರು, ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಸ್ವಾಗತಿಸಿದರು. ಲೋಕೇಶ್ ಶೆಟ್ಟಿ ಮತ್ತು ಮಹಾವೀರ್ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಬಳಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ಹಿರಿಯರಿಗೆ ಗೌರವಾರ್ಪಣೆ ಕಾರ್ಯಕ್ರಮ‌

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾಗಣೇಶ ಸಭಾಭವನದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಯಾರೂ ನಾಮಪತ್ರ ಸಲ್ಲಿಸದ ಹಿನ್ನಲೆ ಪ್ರಭಾರ ಅಧ್ಯಕ್ಷರಾಗಿ ಪೂರ್ಣಾಕ್ಷ ಮುಂದುವರಿಕೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ಉಸ್ತುವಾರಿ ಸಚಿವ ಗುಂಡೂರಾವ್ ರವರಿಗೆ ಮನವಿ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ ಲೈನ್ ಮಂಜೊಟ್ಟಿ ಶಾಲೆಯ ವಿದ್ಯಾರ್ಥಿ ಮಹಮ್ಮದ್ ಶಮ್ಮಾಝ್ ಶರೀಫ್ ತೃತೀಯ ಸ್ಥಾನ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ವೈಭವಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ‌ ಸೆಳೆದ ಕುಣಿತಾ ಭಜನೆ

Suddi Udaya
error: Content is protected !!