25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಆಸ್ಪತ್ರೆ, ಬೆಳ್ತಂಗಡಿ ಲಯನ್ಸ್ ಸೇವಾ ಸಂಸ್ಥೆ, ಲಿಯೋ ಕ್ಲಬ್ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬೆಳಾಲು: ಹತ್ತನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಶ್ರೀ ಮಾಯಾಮಹದೇವ ದೇವಸ್ಥಾನ ಬೆಳಾಲು ವಠಾರದಲ್ಲಿ ಜೂ 07 ರಿಂದ 15 ದಿನಗಳ ಕಾಲ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಆಸ್ಪತ್ರೆ ಉಜಿರೆ, ಅಂತರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆ ಬೆಳ್ತಂಗಡಿ, ಲಿಯೋ ಕ್ಲಬ್ ಬೆಳ್ತಂಗಡಿ ಸಹಯೋಗದಲ್ಲಿ ನಡೆದ ಯೋಗ ತರಬೇತಿ ಶಿಬಿರ ಜೂ.21 ರಂದು ಸಮಾರೋಪಗೊಂಡಿತು.

ಯೋಗ ತರಬೇತಿ ನೀಡಿದ ಕು| ದೀಪ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಮಹತ್ವವನ್ನು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಸದಸ್ಯ ಲ. ಚಂದ್ರ ಕುಮಾರ್ ಶೆಟ್ಟಿ ನಾರ್ಯ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಯೋಗಾಸನ ತರಬೇತಿ ಶಿಬಿರದಲ್ಲಿ ಪಾಲ್ಗೊಂಡಿರುವ ಎಲ್ಲರಿಗೂ ಶುಭಾಶಯ ಕೋರುತ್ತಾ ಯೋಗದಿಂದ ಆರೋಗ್ಯವಂತ ಜೀವನ ನಿಮ್ಮದಾಗಲಿ ಎಂದು ತಿಳಿಸಿದರು.

ವೇದಿಕೆಯಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ನ ನಿಕಟಪೂರ್ವ ಅಧ್ಯಕ್ಷ ಲ. ಡಾ. ದೇವಿಪ್ರಸಾದ್ ಬೊಲ್ಮ, ಲಿಯೋ ಕ್ಲಬ್ ನ ಕಾರ್ಯಕ್ರಮ ಸಂಯೋಜಕರಾದ ಲಿಯೋ ಗ್ಲೆನ್ ಉಪಸ್ಥಿತರಿದ್ದರು. ಯೋಗ ತರಬೇತಿ ನೀಡಿದ ಎಸ್ ಡಿ ಎಮ್ ಯೋಗ ವಿಜ್ಞಾನಿಗಳ ಕಾಲೇಜಿನ ಕು. ದೀಪ ಇವರನ್ನು ಶಿಬಿರಾರ್ಥಿಗಳ ಪರವಾಗಿ ಗೌರವಿಸಲಾಯಿತು. ಯೋಗ ತರಬೇತಿ ಶಿಬಿರದಲ್ಲಿ ಭಾಗವಹಿಸಿದ ಎಲ್ಲರಿಗೂ ಭಾರತ ಸಂವಿಧಾನದ ಅರಿವು ಪುಸ್ತಕವನ್ನು ನೀಡಲಾಯಿತು.

Related posts

ಜಿಲ್ಲಾಮಟ್ಟದ ರಸಪ್ರಶ್ನೆ: ವೇಣೂರು ಸ. ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ ) ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಭಜನಾ ಮಂದಿರಕ್ಕೆ ಸಹಾಯಧನ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ಸಾಂಪ್ರದಾಯಿಕ ದಿನಾಚರಣೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವಿದ್ಯಾರ್ಥಿಗಳಿಗೆ ರೂ. 25.5 ಲಕ್ಷ ಸ್ಕಾಲರ್ ಶಿಫ್ ನೀಡಿ ರೋಟರಿ ಜಿಲ್ಲೆಯಲ್ಲಿ ಮುಂಚೂಣಿಯಲ್ಲಿದೆ: ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಗವರ್ನರ್ ರೋ| ವಿಕ್ರಂ ದತ್ತಾ ಪ್ರಶಂಸೆ

Suddi Udaya

ಜಾಗ ಮಾರಾಟದ ಅಗ್ರಿಮೆಂಟ್ ಮಾಡಿ ರೂ.45ಲಕ್ಷ ವಂಚನೆ; ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ‌ ದಾಖಲು

Suddi Udaya

ಬೆಳ್ತಂಗಡಿ ಸುವರ್ಣ ಆರ್ಕೇಡ್‌ನಲ್ಲಿ ರಾಜ್‌ಎಂಟರ್‌ಪ್ರೈಸಸ್ ಸೈಬರ್ ಸೆಂಟರ್ ಶುಭಾರಂಭ

Suddi Udaya
error: Content is protected !!