ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಆಸ್ಪತ್ರೆ, ಬೆಳ್ತಂಗಡಿ ಲಯನ್ಸ್ ಸೇವಾ ಸಂಸ್ಥೆ, ಲಿಯೋ ಕ್ಲಬ್ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬೆಳಾಲು: ಹತ್ತನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಶ್ರೀ ಮಾಯಾಮಹದೇವ ದೇವಸ್ಥಾನ ಬೆಳಾಲು ವಠಾರದಲ್ಲಿ ಜೂ 07 ರಿಂದ 15 ದಿನಗಳ ಕಾಲ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಆಸ್ಪತ್ರೆ ಉಜಿರೆ, ಅಂತರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆ ಬೆಳ್ತಂಗಡಿ, ಲಿಯೋ ಕ್ಲಬ್ ಬೆಳ್ತಂಗಡಿ ಸಹಯೋಗದಲ್ಲಿ ನಡೆದ ಯೋಗ ತರಬೇತಿ ಶಿಬಿರ ಜೂ.21 ರಂದು ಸಮಾರೋಪಗೊಂಡಿತು.

ಯೋಗ ತರಬೇತಿ ನೀಡಿದ ಕು| ದೀಪ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಮಹತ್ವವನ್ನು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಸದಸ್ಯ ಲ. ಚಂದ್ರ ಕುಮಾರ್ ಶೆಟ್ಟಿ ನಾರ್ಯ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಯೋಗಾಸನ ತರಬೇತಿ ಶಿಬಿರದಲ್ಲಿ ಪಾಲ್ಗೊಂಡಿರುವ ಎಲ್ಲರಿಗೂ ಶುಭಾಶಯ ಕೋರುತ್ತಾ ಯೋಗದಿಂದ ಆರೋಗ್ಯವಂತ ಜೀವನ ನಿಮ್ಮದಾಗಲಿ ಎಂದು ತಿಳಿಸಿದರು.

ವೇದಿಕೆಯಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ನ ನಿಕಟಪೂರ್ವ ಅಧ್ಯಕ್ಷ ಲ. ಡಾ. ದೇವಿಪ್ರಸಾದ್ ಬೊಲ್ಮ, ಲಿಯೋ ಕ್ಲಬ್ ನ ಕಾರ್ಯಕ್ರಮ ಸಂಯೋಜಕರಾದ ಲಿಯೋ ಗ್ಲೆನ್ ಉಪಸ್ಥಿತರಿದ್ದರು. ಯೋಗ ತರಬೇತಿ ನೀಡಿದ ಎಸ್ ಡಿ ಎಮ್ ಯೋಗ ವಿಜ್ಞಾನಿಗಳ ಕಾಲೇಜಿನ ಕು. ದೀಪ ಇವರನ್ನು ಶಿಬಿರಾರ್ಥಿಗಳ ಪರವಾಗಿ ಗೌರವಿಸಲಾಯಿತು. ಯೋಗ ತರಬೇತಿ ಶಿಬಿರದಲ್ಲಿ ಭಾಗವಹಿಸಿದ ಎಲ್ಲರಿಗೂ ಭಾರತ ಸಂವಿಧಾನದ ಅರಿವು ಪುಸ್ತಕವನ್ನು ನೀಡಲಾಯಿತು.

Related posts

ಬಳಂಜ ಸರಕಾರಿ ಪ್ರೌಢ ಶಾಲೆಗೆ ಶೇ.92.5 ಫಲಿತಾಂಶ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಅಂಗವಾಗಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

Suddi Udaya

ಬೆಳ್ತಂಗಡಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಕನ್ನಡ ರಾಜ್ಯೋತ್ಸವ

Suddi Udaya

ಮರೋಡಿ-ಪೆರಾಡಿ ಗ್ರಾಮಗಳಲ್ಲಿ ಮಹಾಮಳೆಗೆ ಅನಾಹುತ, ಅಗತ್ಯ ಕ್ರಮ ಕೈಗೊಂಡ ಪಂಚಾಯತ್ ಆಡಳಿತ

Suddi Udaya

ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿ ವತಿಯಿಂದ ನೃತ್ಯ ಭಜನೋತ್ಸವ

Suddi Udaya

Carotid body tumor ಎಂಬ ವಿಚಿತ್ರ ಖಾಯಿಲೆಯಿಂದ ಬಳಲುತ್ತಿರುವ ಮರೋಡಿಯ ಯುವಕ: ಶಸ್ತ್ರಚಿಕಿತ್ಸೆಗೆ ಬರೋಬ್ಬರಿ ರೂ. 8 ಲಕ್ಷದ ಅವಶ್ಯಕತೆ, ಬಡಕುಟುಂಬ ಸಹೃದಯ ದಾನಿಗಳ ಸಹಕಾರವನ್ನು ಎದುರು ನೋಡುತ್ತಿದೆ

Suddi Udaya
error: Content is protected !!