ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಉಜಿರೆ: ಮಾನವ ಕುಲದ ಸೇವೆಯೇ ಜೀವನದ ಅತ್ಯುತ್ತಮ ಕಾರ್ಯ. ದೇಶದ ಹಾಗೂ ಸಮುದಾಯದ ಅಭಿವೃದ್ದಿಯೊಂದಿಗೆ ವೈಯಕ್ತಿಕ ಉದ್ಧಾರವೂ ಮುಖ್ಯ. ಮಾನವೀಯ ಮೌಲ್ಯ ಅರಿಯುವುದರೊಂದಿಗೆ ನಾಯಕತ್ವ ಗುಣ , ಪ್ರತಿಭಾ ಅಭಿವ್ಯಕ್ತಿಗೆ , ಅಸಹಾಯಕರಿಗೆ ಸಹಾಯ ಇತ್ಯಾದಿ ಗುಣಗಳಿಗೆ ರಾಷ್ಟ್ರೀಯ ಸೇವಾ ಯೋಜನೆ ಪೋಷಕವಾಗಿದೆ. ಜಗತ್ತಿನ ಶ್ರೇಷ್ಠ ಸಂಪತ್ತು ಮಾನವನ ವ್ಯಕ್ತಿತ್ವದಲ್ಲಿ ಅಡಗಿದೆ. ಅಂತಹ ವ್ಯಕ್ತಿತ್ವ ವಿಕಸನಕ್ಕೆ ಈ ಯೋಜನೆ ಒಳ್ಳೆಯ ವೇದಿಕೆ. ಒಟ್ಟಾರೆ ರಾಷ್ಟ್ರೀಯ ಸೇವಾ ಯೋಜನೆಯಿಂದ ನಮ್ಮ ವ್ಯಕ್ತಿತ್ವದ ಉನ್ನತಿ ಸಾಧ್ಯ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಪ್ರಾಚಾರ್ಯ ಡಾ. ಬಿ. ಎ. ಕುಮಾರ ಹೆಗ್ಡೆ ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಹಾಗೂ ಪ್ರತಿಜ್ಞಾ ವಿಧಿ ಬೋಧಿಸಿದ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ಸೇವೆಯೊಂದಿಗೆ ನಾಯಕನಾಗಿ ಬೆಳೆಯಲು ರಾ. ಸೇ.ಯೋಜನೆಯಿಂದ ಸಾಧ್ಯ ಎಂದು ನುಡಿದರು.

ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ , ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು.
ರಾ. ಸೇ. ಯೋಜನೆಯ ಸಲಹಾ ಸಮಿತಿಯ ಸದಸ್ಯ ಹಾಗೂ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ರಾಜೇಶ್ ಕೆ ಹಾಜರಿದ್ದರು.

ಘಟಕದ ನಾಯಕಿ ಪ್ರಾಪ್ತಿ ಸ್ವಾಗತಿಸಿ , ನಾಯಕ ಆದಿತ್ಯ ವಂದಿಸಿದರು. ಸ್ವಯಂ ಸೇವಕಿ ಸಾಕ್ಷಿ ನಿರೂಪಿಸಿದರು.

Related posts

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿದ್ಯಾರ್ಥಿ ಅಭಿಷೇಕ್ ರಿಗೆ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರ್‍ಯಾಂಕ್

Suddi Udaya

ಮಾಣೂರು ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನದ ಜೀರ್ಣೋದ್ಧಾರಕ್ಕೆ 1,ಲಕ್ಷ ದೇಣಿಗೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಒಂದೇ ದಿನ ಮೂರು ವಾಹನಗಳು ಪಲ್ಟಿ

Suddi Udaya

ಅಧಿಕೃತ ಪಡಿತರ ಚೀಟಿ ನವೀಕರಣ ಕೇಂದ್ರ, ಬಸ್ ಪಾಸ್ ವಿತರಣಾ ಕೇಂದ್ರವಾದ ಕರ್ನಾಟಕ ಒನ್ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಕರಂಬಾರು:ವಿಪರೀತ ಮಳೆಯಿಂದ ಅಣೆಕಟ್ಟಿನಲ್ಲಿ ಮರಗಳ ರಾಶಿ, ಪಕ್ಕದ ತೋಟಕ್ಕೆ ಹರಿದ ನೀರು, ಕೃಷಿಗೆ ಹಾನಿ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವದ ಬಗ್ಗೆ ಹಿತ ಚಿಂತಕರ ಸಭೆ: ಅಮೃತ ಮಹೋತ್ಸವದ ಅಧ್ಯಕ್ಷರಾಗಿ ಚಂದ್ರಶೇಖರ್ ಪಿ‌.ಕೆ ಆಯ್ಕೆ

Suddi Udaya
error: Content is protected !!