ಜು. 13: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ “ಶ್ರೀ ಗುರುಸಾನಿಧ್ಯ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಆಡಳಿತ ಕಚೇರಿಯ ಉದ್ಘಾಟನೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ (ನಿ.) ಕೇಂದ್ರ ಕಛೇರಿ, ಬೆಳ್ತಂಗಡಿ ಇದರ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣದ ಲೋಕಾರ್ಪಣೆ ಹಾಗೂ ಆಡಳಿತ ಕಚೇರಿಯ ಉದ್ಘಾಟನಾ ಸಮಾರಂಭವು ಜು. 13 ರ ಶನಿವಾರದಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯು ಜೂ. 22ರಂದು ಶ್ರೀ ಗುರುದೇವ ವಿವಿಧೋದ್ದೇಶದ ಕಚೇರಿಯಲ್ಲಿ ಬಿಡುಗಡೆಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಎನ್‌. ಪದ್ಮನಾಭ ಮಾಣಿಂಜ , ಉಪಾಧ್ಯಕ್ಷರಾದ ಭಗೀರಥ, ಜಿ , ವಿಶೇಷಾಧಿಧಿಕಾರಿಯಾದ ಯಂ. ಮೋನಪ್ಪ ಪೂಜಾರಿ ಕಂಡೆತ್ಯಾರು , ಮುಖ್ಯ ಕಾರ್ಯನಿರ್ವಾಯಣಾಧಿಕಾರಿಯಾದ ಅಶ್ವತ್ಥ ಕುಮಾರ್ , ಆಡಳಿತ ಮಂಡಳಿ ನಿರ್ದೇಶಕರಾದ ಶ್ರೀಮತಿ ಸುಜಿತಾ ವಿ. ಬಂಗೇರ, ಸಂಜೀವ ಪೂಜಾರಿ, ಶ್ರೀಮತಿ ತನುಜಾ ಶೇಖರ್, ಕೆ.ಪಿ. ದಿವಾಕರ, ಜಗದೀಶ್ಚಂದ್ರ ಡಿ.ಕೆ, ಚಂದ್ರಶೇಖರ್, ಜಯವಿಕ್ರಮ. ಪಿ, ಧರಣೇಂದ್ರ ಕುಮಾರ್, ಆನಂದ ಪೂಜಾರಿ ಸರ್ವೆದೋಳ, ಡಾ| ರಾಜಾರಾಮ್ ಕೆ.ಬಿ ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Leave a Comment

error: Content is protected !!