33.4 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿನಲ್ಲಿ ಯೋಗ ದಿನಾಚರಣೆ

ನಿಟ್ಟಡೆ : ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿನಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶಾಲಾ ಯೋಗ ತರಬೇತುದಾರರಾದ ಸತೀಶ್ ಆಚಾರ್ಯ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಮಾರ್ಗದರ್ಶನವನ್ನು ನೀಡಿ ಉತ್ತಮ ರೀತಿಯಲ್ಲಿ ಪ್ರಾಣಾಯಾಮ ಮತ್ತು ವಿವಿಧ ರೀತಿಯ ಆಸನಗಳನ್ನು ಮಾಡಿಸಿದರು .

ಶಾಲಾ ಸಂಚಾಲಕ ಗಿರೀಶ್ ಕೆಎಚ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಅಶ್ವಿತ್ ಕುಲಾಲ್ ಯೋಗಾಸನದಲ್ಲಿ ಪಾಲ್ಗೊಂಡಿದ್ದರು.

ಮುಖ್ಯ ಅತಿಥಿಯಾಗಿ ಗೋವರ್ಧನ್ ಹೆಚ್. ಸಿಎಸ್‌ಸಿ ಗೌವರ್ನೆನ್ಸ್ ಇಂಡಿಯನ್ ಸರ್ವಿಸಸ್ ಲಿಮಿಟೆಡ್ ಉಪಸ್ಥಿತರಿದ್ದು, ಯೋಗ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಓಮನ ಹಾಗೂ ಪವನ್ ಸೀನಿಯರ್ ಎಕ್ಸಿಕ್ಯೂಟಿವ್ ಎಸ್ ಬಿ ಐ ಜನರಲ್ ಇನ್ಸೂರೆನ್ಸ್ ಮಂಗಳೂರು ಮತ್ತು ಹರಿಣಾಕ್ಷಿ ಸಿ ಎ ಸ್ಸಿ ಸೆಂಟರ್ ನಾರಾವಿ ಉಪಸ್ಥಿತರಿದ್ದರು.

ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ವಾಣಿ ಯೋಗಾಸನದಿಂದ ಆಗುವ ಉಪಯೋಗವನ್ನು ತಿಳಿಸಿದರು. ಕಾರ್ಯಕ್ರಮವನ್ನು ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶ್ರೀಮತಿ ಸುಜಾತ ನಿರೂಪಿಸಿ, ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಅಕ್ಷತ ಸ್ವಾಗತಿಸಿ, ಕಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಪವಿತ್ರ ಧನ್ಯವಾದವಿತ್ತರು. ಎಲ್ಲಾ ಶಿಕ್ಷಕ, ಉಪನ್ಯಾಸಕ ವೃಂದದವರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.

Related posts

ಪುಂಜಾಲಕಟ್ಟೆ ಯುವಕ ಸೈನೇಡ್ ಸೇವಿಸಿ ಆತ್ಮಹತ್ಯೆ

Suddi Udaya

ಉಜಿರೆ: ಪೇಂಟಿಂಗ್ ಮಾಡುವಾಗ ಬಿದ್ದು ಗಾಯಗೊಂಡಿದ್ದ ಪ್ರಮೋದ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ದಯಾ ವಿಶೇಷ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ನಾಳ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ, ರಾತ್ರಿ ಭಜನೆ, ರಂಗಪೂಜೆ

Suddi Udaya

ಮಗನ ಮದುವೆ ಸಂಭ್ರಮದಲ್ಲಿ ಇದ್ದ ತಂದೆ ಹೃದಯಾಘಾತದಿಂದ ಸಾವು

Suddi Udaya

ಮಾಚಾರು: ಬದನಾಜೆ ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂಡಳಿಯ 45ನೇ ವರ್ಷದ ಶಾರದಾ ಪೂಜೆ

Suddi Udaya
error: Content is protected !!