ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿನಲ್ಲಿ ಯೋಗ ದಿನಾಚರಣೆ

ನಿಟ್ಟಡೆ : ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿನಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶಾಲಾ ಯೋಗ ತರಬೇತುದಾರರಾದ ಸತೀಶ್ ಆಚಾರ್ಯ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಮಾರ್ಗದರ್ಶನವನ್ನು ನೀಡಿ ಉತ್ತಮ ರೀತಿಯಲ್ಲಿ ಪ್ರಾಣಾಯಾಮ ಮತ್ತು ವಿವಿಧ ರೀತಿಯ ಆಸನಗಳನ್ನು ಮಾಡಿಸಿದರು .

ಶಾಲಾ ಸಂಚಾಲಕ ಗಿರೀಶ್ ಕೆಎಚ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಅಶ್ವಿತ್ ಕುಲಾಲ್ ಯೋಗಾಸನದಲ್ಲಿ ಪಾಲ್ಗೊಂಡಿದ್ದರು.

ಮುಖ್ಯ ಅತಿಥಿಯಾಗಿ ಗೋವರ್ಧನ್ ಹೆಚ್. ಸಿಎಸ್‌ಸಿ ಗೌವರ್ನೆನ್ಸ್ ಇಂಡಿಯನ್ ಸರ್ವಿಸಸ್ ಲಿಮಿಟೆಡ್ ಉಪಸ್ಥಿತರಿದ್ದು, ಯೋಗ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಓಮನ ಹಾಗೂ ಪವನ್ ಸೀನಿಯರ್ ಎಕ್ಸಿಕ್ಯೂಟಿವ್ ಎಸ್ ಬಿ ಐ ಜನರಲ್ ಇನ್ಸೂರೆನ್ಸ್ ಮಂಗಳೂರು ಮತ್ತು ಹರಿಣಾಕ್ಷಿ ಸಿ ಎ ಸ್ಸಿ ಸೆಂಟರ್ ನಾರಾವಿ ಉಪಸ್ಥಿತರಿದ್ದರು.

ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ವಾಣಿ ಯೋಗಾಸನದಿಂದ ಆಗುವ ಉಪಯೋಗವನ್ನು ತಿಳಿಸಿದರು. ಕಾರ್ಯಕ್ರಮವನ್ನು ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶ್ರೀಮತಿ ಸುಜಾತ ನಿರೂಪಿಸಿ, ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಅಕ್ಷತ ಸ್ವಾಗತಿಸಿ, ಕಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಪವಿತ್ರ ಧನ್ಯವಾದವಿತ್ತರು. ಎಲ್ಲಾ ಶಿಕ್ಷಕ, ಉಪನ್ಯಾಸಕ ವೃಂದದವರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.

Related posts

ಸ್ಟೂಡೆಂಟ್ ನರ್ಸಸ್ ಅಸೋಸಿಯೇಷನ್ ಇನ್ ಟ್ರೈನ್ಡ್ ನರ್ಸಸ್ ಅಸೋಸಿಯೇಷನ್ ಆಫ್ ಇಂಡಿಯಾ ಕಾರ್ಯದರ್ಶಿಯಾಗಿ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಸಿಂಚನಾ ಎಂ.ಡಿ ಆಯ್ಕೆ

Suddi Udaya

ತಮಿಳುನಾಡು ಸ್ವಾಮೀಜಿ ಧರ್ಮಸ್ಥಳ ಭೇಟಿ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ವೇಣೂರು ಸರ್ಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿನಿಯರ ಅದ್ಭುತ ಸಾಧನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ : ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಟಿ. ಜಯಂತ್ ಹಾಗೂ ಎಂ.ಡಿ ಸಮೀರ್ ವಿರುದ್ಧ ತನಿಖೆ ಕೋರಿ ಕೋರ್ಟ್ ಗೆ ಅರ್ಜಿ

Suddi Udaya

ವೇಣೂರು ಹಿದಾಯಾತುಲ್ ಇಸ್ಲಾಂ ಮದ್ರಸದ ಅಧ್ಯಾಪಕ ಅಬ್ದುಲ್ ರಹಿಮಾನ್ ಮುಸ್ಲಿಯಾರ್ ನಿಧನ

Suddi Udaya

ಕಲ್ಮಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಯೋಗಾಸನದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
error: Content is protected !!