ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಉಜಿರೆ : 10 ನೇ ವರ್ಷದ ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಜೂ. 21 ರಂದು ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ( ಎಂಡೋಸಲ್ಫಾನ್ ಮಕ್ಕಳ ಪೀಡಿತರಿಗಾಗಿ ) ಕೇಂದ್ರ ವಿಶೇಷ ಚೇತನ ಮಕ್ಕಳೊಂದಿಗೆ ಬಹಳ ವಿಶೇಷವಾಗಿ ಯೋಗ ದಿನಾಚರಣೆ ಆಚರಿಸಲಾಯಿತು.

ಶಾಲೆಯ ಮಕ್ಕಳಿಗೆ ಮಧ್ಯಾಹ್ನ ದ ಊಟದ ವ್ಯವಸ್ಥೆ ಯನ್ನು ಮಹಿಳಾ ಮೋರ್ಚಾದ ವತಿಯಿಂದ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾಶ್ರೀನಿವಾಸ್ ಗೌಡ ಬೆಳಾಲು, ಪ್ರಧಾನಕಾರ್ಯದರ್ಶಿ ಗಳಾದ ಪೂರ್ಣಿಮಾ ಜಯಂತ್ ಮುಂಡಾಜೆ ಹಾಗೂ ತುಳಸಿ ಉಮೇಶ್, ಕಾರ್ಯದರ್ಶಿ ಶಶಿಕಲಾ ಸಾಯಿಕೃಪಾ ,ಕೋಶಾಧಿಕಾರಿ ಸಂಗೀತ ಶೆಟ್ಟಿ ಮಡoತ್ಯಾರು ,ಸದಸ್ಯರುಗಳು ಉಜಿರೆ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಕೊಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ದಯಾಮಣಿ ಹಾಗೂ ಮಂಡಲ ಮಹಿಳಾ ಮೋರ್ಚಾ ಸದಸ್ಯರು, ಶಾಲಾ ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Comment

error: Content is protected !!