September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಗತಿ ಆರಂಭ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಶ್ರೀ ಧ ಮಂ ಆಡಳಿತ ಮಂಡಳಿಯ ವತಿಯಿಂದ ಉಚಿತ ಯಕ್ಷಗಾನ ತರಗತಿಯು ಆರಂಭವಾಯಿತು. ವಾರದಲ್ಲಿ ಒಂದು ತರಗತಿಯು ನಿರಂತರವಾಗಿ ನಡೆಯಲಿದ್ದು, ಇದರ ಉದ್ಘಾಟನೆಯನ್ನು ನೆರವೇರಿಸಿದ ಬೆಳಾಲು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ದಾಮೋದರ ಗೌಡ ಸುರುಳಿಯವರು ಮಾತನಾಡುತ್ತಾ, ಯಕ್ಷಗಾನ ಕಲಿಕೆಯ ಮೂಲಕ ನಮ್ಮ ಪುರಾಣಗಳ ಬಗ್ಗೆ ತಿಳುವಳಿಕೆಯೊಂದಿಗೆ, ಜೀವನ ಮೌಲ್ಯಗಳ ಅರಿವಿನೊಂದಿಗೆ ಸಂಸ್ಕೃತಿಯ ಪರಿಚಯ ಮತ್ತು ಸಂಸ್ಕಾರವೂ ಸಿಗಲಿದೆಯೆಂದು ಅಭಿಪ್ರಾಯಪಟ್ಟರು.

ಸಮಾರಂಭದ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರು ವಹಿಸಿದ್ದರು. ಯಕ್ಷಗಾನ ನಾಟ್ಯ ಗುರುಗಳಾಗಿ ಖ್ಯಾತ ಯಕ್ಷಗಾನ ಕಲಾವಿದರಾದ ಪಿ. ಲಕ್ಷ್ಮಣ ಗೌಡರವರು ತರಬೇತಿಯನ್ನು ನೀಡಲಿದ್ದಾರೆ. ವೇದಿಕೆಯಲ್ಲಿ ಶಿಕ್ಷಕ ಸಿಬ್ಬಂದಿಗಳೆಲ್ಲರು ಉಪಸ್ಥಿತರಿದ್ದರು.

ನಾಟ್ಯ ತರಗತಿಯ ವಿದ್ಯಾರ್ಥಿಗಳಾದ ಕು. ಅಶ್ವಿನಿ ಸ್ವಾಗತಿಸಿ, ಕೀರ್ತಿ ವಂದಿಸಿದರು, ಕು. ಅಂಕಿತಾ ಕಾರ್ಯಕ್ರಮ ನಿರೂಪಿಸಿದರು.

Related posts

ಕಣಿಯೂರು ಗ್ರಾ.ಪಂ. ಮಾಜಿ ಉಪಾಧ್ಯಕ್ಷೆ ಸರಸ್ವತಿ ಹೃದಯಾಘಾತದಿಂದ ನಿಧನ

Suddi Udaya

ದೇಗುಲದ ಪರಿಸರದಲ್ಲಿ ತಿರುಗಾಡುತ್ತಿದ್ದ ಒಂಟಿ ಮಹಿಳೆಯನ್ನು ಅವರ ಊರಿಗೆ ಕಳುಹಿಸಿ ಮಾನವೀಯತೆ ಮೆರೆದ ಪೋಲೀಸ್ ಇಲಾಖೆ ಹಾಗೂ ಸಮಾಜ ಸೇವಕ ರವಿ ಕಕ್ಕೆಪದವು

Suddi Udaya

ಉಜಿರೆ : ಅತ್ತಾಜೆ ಶತಾಯುಷಿ ಬಿಫಾತಿಮಾ ನಿಧನ

Suddi Udaya

ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಹಮೀದ್ ಜಿ.ಡಿ.

Suddi Udaya

ಪುದುವೆಟ್ಟು ಗ್ರಾಮ ಸಭೆ: ಕಂದಾಯ ಇಲಾಖೆಯ ಅಧಿಕಾರಿಗಳ ಗೈರು, ಗ್ರಾಮಸ್ಥರು ಅಕ್ರೋಶ

Suddi Udaya

ಬೆಳ್ತಂಗಡಿ ತಾಲೂಕು 19 ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಬಿ. ಭುಜಬಲಿ ಧರ್ಮಸ್ಥಳ

Suddi Udaya
error: Content is protected !!