ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 350ನೇ ಪಟ್ಟಾಭಿಷೇಕ ಸಂಭ್ರಮಾಚರಣೆ

Suddi Udaya

ಮುಂಡಾಜೆ ಪದವಿಪೂರ್ವ ಕಾಲೇಜಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 350ನೇ ಪಟ್ಟಾಭಿಷೇಕದ ಸಂಭ್ರಮಾಚರಣೆಯನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಉಜಿರೆ ತಾಲೂಕು ಸಂಪರ್ಕ ಪ್ರಮುಖ್, ಶಿವಪ್ರಸಾದ ಸುರಿಯ ವಿದ್ಯಾರ್ಥಿಗಳಿಗೆ ಶಿವಾಜಿ ಮಹಾರಾಜರ ಸಾಧನೆಗಳ ಅವರ ಪರಾಕ್ರಮಗಳ ಬಗ್ಗೆ ಹಾಗೂ ಅವರು ಸ್ವರಾಜ್ಯಕೊಸ್ಕರ ಹೋರಾಟ ಮಾಡಿದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು.

ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ವಿನಯ ಚಂದ್ರ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಜಾಲಿ ಓ ಎ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಧನ್ಯ ಕಾರ್ಯಕ್ರಮವನ್ನು ನಿರೂಪಿಸಿದರು ಹಾಗೂ ಕನ್ನಡ ಉಪನ್ಯಾಸಕಿ ಶ್ರೀಮತಿ ವಸಂತಿ ವೆಂಕಟೇಶ್ ಸ್ವಾಗತಿಸಿ ವಿದ್ಯಾರ್ಥಿ ಧನುಷ್ ಕೆ ಎನ್ ಧನ್ಯವಾದವಿತ್ತರು.

ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ, ಮುಂಡಾಜೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದು ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು.

Leave a Comment

error: Content is protected !!