25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಶಾಲಾ ಬೇಡಿಕೆಗೆ ರಕ್ಷಿತ್ ಶಿವರಾಂ ಸ್ಪಂದನೆ: ಕಲ್ಲೇರಿ ಶಾಲೆಯಲ್ಲಿ ನೂತನ ಶೌಚಾಯ ನಿರ್ಮಾಣ

ಬೆಳ್ತಂಗಡಿ: ರಕ್ಷಿತ್ ಶಿವರಾಂ ಅವರ ಪ್ರಯತ್ನದಿಂದ ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ಅವರು ಮಂಜೂರುಗೊಳಿಸಿದ ರೂ.2 ಲಕ್ಷ ಅನುದಾನದಲ್ಲಿ ಕಲ್ಲೇರಿ ಕಿರಿಯ ಪ್ರಾಥಮಿಕ ಶಾಲೆಯ ಹಲವು ವರ್ಷಗಳ ಬೇಡಿಕೆಯಾದ ನೂತನ ಶೌಚಾಲಯವನ್ನು ನಿರ್ಮಿಸಲಾಗಿದೆ.

ಕಲ್ಲೇರಿ ಕಿರಿಯ ಪ್ರಾಥಮಿಕ ಶಾಲೆಯ ಅಧ್ಯಾಪಕ ವೃಂದ, ಅಭಿವೃದ್ದಿ ಸಮಿತಿ ಕೊನೆಗೆ ಕಳೆದ ವರ್ಷ ಶಾಲಾ ವಾರ್ಷಿಕ ದಿನದಂದು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ರಕ್ಷಿತ್ ಶಿವರಾಂರವರಿಗೆ ಶಾಲಾ ಮುಖ್ಯೋಪಾಧ್ಯಾಯರು, ಸಮಿತಿ ಹಾಗೂ ಊರವರು ಸೇರಿಕೊಂಡು ತಮ್ಮ ಶಾಲಾ ಮಕ್ಕಳಿಗೆ ಶೌಚಾಲಯ ಇಲ್ಲದೆ ಎದುರಿಸುತ್ತಿರುವ ಸಮಸ್ಯೆಯನ್ನು ಮನವಿ ಪತ್ರದ ಮೂಲಕ ತಿಳಿಸಿದ್ದರು.
ಕೂಡಲೇ ರಕ್ಷಿತ್ ಶಿವರಾಂ ಅವರು ವಿಧಾನ ಪರಿಷತ್ ಸದಸ್ಯರಾದ ಹರಿಪ್ರಸಾದ್ ಅವರ ಗಮನಕ್ಕೆ ತಂದಾಗ, ಇದಕ್ಕೆ ಸ್ಪಂದಿಸಿ, ತಮ್ಮ ವಿಧಾನ ಪರಿಷತ್ ನಿಧಿಯಿಂದ ಸುಮಾರು ರೂ. 2ಲಕ್ಷ ಅನುದಾನ ಮಂಜೂರುಗೊಳಿಸಿದ್ದು, ಈಗಾಗಲೇ ಕಟ್ಟಡ ಸಂಪೂರ್ಣಗೊಂಡು ಶಾಲೆಯ ಬೇಡಿಕೆ ಈಡೇರಿದೆ. ಶಾಲೆಯ ಬೇಡಿಕೆ ಈಡೇರಿಸಿದ ರಕ್ಷಿತ್ ಶಿವರಾಂ ಅವರಿಗೆ ಊರವರು ಕೃತಜ್ಞತೆ ಸಲ್ಲಿಸಿದ್ದಾರೆ.

Related posts

ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ದಿ| ಉದಯಕುಮಾರ್ ಸ್ಮರಣಾರ್ಥ “ಸೂರ್ಯೋದಯ” ಕೃತಿ ಬಿಡುಗಡೆ

Suddi Udaya

ಸಾವ್ಯ ಕರ್ಪೋಟ್ಟು ಅನುರಾಧ ನಿವಾಸದ ಶ್ರೀಮತಿ ರಾಧಾ ಹೃದಯಾಘಾತದಿಂದ ನಿಧನ

Suddi Udaya

ಮಿತ್ತಬಾಗಿಲು: ನೆಲ್ಲಿಗುಡ್ಡೆಯಲ್ಲಿ ಗುಡ್ಡ ಜರಿದು ಮನೆಗೆ ಹಾನಿ

Suddi Udaya

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ ಮುಳಿಕ್ಕಾರ್ ನಲ್ಲಿ ಕಾಡಾನೆ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!