25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಆಸ್ಪತ್ರೆ, ಬೆಳ್ತಂಗಡಿ ಲಯನ್ಸ್ ಸೇವಾ ಸಂಸ್ಥೆ, ಲಿಯೋ ಕ್ಲಬ್ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬೆಳಾಲು: ಹತ್ತನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಶ್ರೀ ಮಾಯಾಮಹದೇವ ದೇವಸ್ಥಾನ ಬೆಳಾಲು ವಠಾರದಲ್ಲಿ ಜೂ 07 ರಿಂದ 15 ದಿನಗಳ ಕಾಲ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಆಸ್ಪತ್ರೆ ಉಜಿರೆ, ಅಂತರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆ ಬೆಳ್ತಂಗಡಿ, ಲಿಯೋ ಕ್ಲಬ್ ಬೆಳ್ತಂಗಡಿ ಸಹಯೋಗದಲ್ಲಿ ನಡೆದ ಯೋಗ ತರಬೇತಿ ಶಿಬಿರ ಜೂ.21 ರಂದು ಸಮಾರೋಪಗೊಂಡಿತು.

ಯೋಗ ತರಬೇತಿ ನೀಡಿದ ಕು| ದೀಪ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಮಹತ್ವವನ್ನು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಸದಸ್ಯ ಲ. ಚಂದ್ರ ಕುಮಾರ್ ಶೆಟ್ಟಿ ನಾರ್ಯ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಯೋಗಾಸನ ತರಬೇತಿ ಶಿಬಿರದಲ್ಲಿ ಪಾಲ್ಗೊಂಡಿರುವ ಎಲ್ಲರಿಗೂ ಶುಭಾಶಯ ಕೋರುತ್ತಾ ಯೋಗದಿಂದ ಆರೋಗ್ಯವಂತ ಜೀವನ ನಿಮ್ಮದಾಗಲಿ ಎಂದು ತಿಳಿಸಿದರು.

ವೇದಿಕೆಯಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ನ ನಿಕಟಪೂರ್ವ ಅಧ್ಯಕ್ಷ ಲ. ಡಾ. ದೇವಿಪ್ರಸಾದ್ ಬೊಲ್ಮ, ಲಿಯೋ ಕ್ಲಬ್ ನ ಕಾರ್ಯಕ್ರಮ ಸಂಯೋಜಕರಾದ ಲಿಯೋ ಗ್ಲೆನ್ ಉಪಸ್ಥಿತರಿದ್ದರು. ಯೋಗ ತರಬೇತಿ ನೀಡಿದ ಎಸ್ ಡಿ ಎಮ್ ಯೋಗ ವಿಜ್ಞಾನಿಗಳ ಕಾಲೇಜಿನ ಕು. ದೀಪ ಇವರನ್ನು ಶಿಬಿರಾರ್ಥಿಗಳ ಪರವಾಗಿ ಗೌರವಿಸಲಾಯಿತು. ಯೋಗ ತರಬೇತಿ ಶಿಬಿರದಲ್ಲಿ ಭಾಗವಹಿಸಿದ ಎಲ್ಲರಿಗೂ ಭಾರತ ಸಂವಿಧಾನದ ಅರಿವು ಪುಸ್ತಕವನ್ನು ನೀಡಲಾಯಿತು.

Related posts

ನಡ: ಸ್ಟಾರ್ ಲೈನ್ ಶಾಲಾ ವಿದ್ಯಾರ್ಥಿ ಪರಿಷತ್ತಿನ ಚುನಾವಣೆ

Suddi Udaya

ಟೆಲಿಗ್ರಾಮ್‌ ಆಪ್‌ ಮೂಲಕ ಹಣ ವರ್ಗಾಹಿಸಿ ಮೋಸ: ಕುವೆಟ್ಟು ನಿವಾಸಿ ನುಪೈಲಾ ರಿಗೆ ರೂ. 6.95 ಲಕ್ಷ ವಂಚನೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಸಂತ ತೆರೇಸಾ ಆಂಗ್ಲ ಮಾಧ್ಯಮ ಹಾಗೂ ಕನ್ನಡ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಭಂಡಾರಿಗೋಳಿ ಬಸ್ ಸ್ಟಾಂಡ್ ಗೆ ಹೊಸ ಶೀಟು ಅಳವಡಿಕೆ

Suddi Udaya

ಎ. 5-6 : ಮದ್ದಡ್ಕದಲ್ಲಿ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಎಂಪಿಎಲ್ ಸೀಸನ್ 6

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!