23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ


ಕೊಯ್ಯೂರು : “ಮಾನಸಿಕ ಮತ್ತು ದೈಹಿಕ ಸ್ವಾಸ್ತ್ಯ ಕಾಪಾಡಲು ಯೋಗ ಅತ್ಯಂತ ಅವಶ್ಯಕತೆಯಾಗಿದೆ. ಯೋಗಾಭ್ಯಾಸವನ್ನು ನಮ್ಮ ಜೀವನದ ಅವಿಭಾಜ್ಯ ಅಂಗವನ್ನಾ ಗಿಸಬೇಕು ” ಎಂದು ಕೊಯ್ಯೂರು ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ರಾಧಾಕೃಷ್ಣ ತಚ್ಚಮೆ ಅಭಿಪ್ರಾಯ ಪಟ್ಟರು.

ಅವರು ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಉದ್ಘಾಟನೆ ನೆರವೇರಿಸಿ ಯೋಗದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಪ್ರೌಢ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಪ್ರವೀಣ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಮೋಹನ್ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ದ ವಿದ್ಯಾರ್ಥಿನಿ ಕುಮಾರಿ ಅಭಿಜ್ಞಾ ವಿ. ಎಮ್. ವಿದ್ಯಾರ್ಥಿಗಳಿಗೆ ಯೋಗ ತರಬೇತಿಯನ್ನು ನಿರ್ವಹಿಸಿದರು.
ವಿದ್ಯಾರ್ಥಿನಿಯರಾದ ಭವ್ಯ, ಪ್ರಜ್ಞಾ, ಪ್ರಮಿತ, ನಿಶ್ಮಿತಾ, ಕವಿತಾ ಪ್ರಾರ್ಥನೆ ಗೈದರು.
ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಪ್ರೀತಿ ಎನ್. ಸ್ವಾಗತಿಸಿ,ಸಮಾಜ ಶಾಸ್ತ್ರ ಉಪನ್ಯಾಸಕ ಶ್ರೀ ಮಾಯಿಲ ವಂದಿಸಿದರು. ಇತಿಹಾಸ ಉಪನ್ಯಾಸಕ ಲಕ್ಷ್ಮಣ ಗೌಡ ಕಾರ್ಯಕ್ರಮ ನಿರ್ವಹಣೆ ಗೈದರು.

Related posts

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ದಿ| ಕಾಶ್ಮೀರಿ ಮೆನೇಜಸ್‌ ರವರಿಗೆ ಶ್ರದ್ಧಾಂಜಲಿ ಸಭೆ

Suddi Udaya

ಉಪ್ಪಿನಂಗಡಿಯ ವೃತ್ತಕ್ಕೆ ಸ್ವಾತಂತ್ರ್ಯ ಹೋರಾಟಗಾರ ಉಬಾರ್ ಮಂಜ ಬೈದ್ಯರ ಹೆಸರಿನಲ್ಲಿ ನಾಮಕರಣ ಮಾಡಲು ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ಮನವಿ

Suddi Udaya

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಚೈತನ್ಯ ವಿಮಾ ಚೆಕ್ ವಿತರಣೆ

Suddi Udaya

ಉಜಿರೆಯಲ್ಲಿ ಬ್ಯೂಟಿ ಬ್ಲಂಡ್ ಸಲೂನ್ ಶುಭಾರಂಭ

Suddi Udaya

ಉಜಿರೆಯ ಎಸ್ ಡಿ ಎಂ ಪಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮಟ್ಟದ ಜೇಸಿಐ ವಿದ್ಯಾರ್ಥಿ ವೇತನ

Suddi Udaya

ಶಿಶಿಲ: ಕೊಳ್ಕೆಬೈಲು ಸ.ಕಿ.ಪ್ರಾ. ಶಾಲೆಯ ಶಿಕ್ಷಕಿ ಸುಗುಣ ಕುಮಾರಿ ಸೇವಾ ನಿವೃತ್ತಿ

Suddi Udaya
error: Content is protected !!