July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ನಾಳೆ(ಜೂ.23): ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಸಂಸದ ಬ್ರಿಜೇಶ್ ಚೌಟ ಭಾಗಿ

ಬೆಳ್ತಂಗಡಿ: ಬೆಳ್ತಂಗಡಿ ಲಯನ್ಸ್ ಕ್ಲಬ್‌ನ ಸುವರ್ಣ ಸಂಭ್ರಮವು ಶ್ರೀ ಕೃಷ್ಣಾನುಗ್ರಹ ಸಭಾಭವನ ರಥಬೀದಿ ಉಜಿರೆಯಲ್ಲಿ ಜೂ.23ರಂದು ನಡೆಯಲಿದೆ.


ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್‌ನ ಅಧ್ಯಕ್ಷ ಉಮೇಶ್ ಶೆಟ್ಟಿ ವಹಿಸಲಿದ್ದಾರೆ. ಗಣ್ಯಾ ಅತಿಥಿಗಳಾಗಿ ದ.ಕ. ಜಿಲ್ಲಾ ಲೋಕಸಭಾ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟ, ಲಯನ್ಸ್ ಜಿಲ್ಲೆ ರಾಜ್ಯಪಾಲ ಲ. ಡಾ. ಮೇಲ್ವಿನ್ ಡಿಸೋಜಾ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕರುಗಳಾದ ಪ್ರತಾಪ್‌ಸಿಂಹ ನಾಯಕ್, ಹರೀಶ್ ಕುಮಾರ್, ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯ, ಲಯನ್ಸ್ ಪ್ರಾಂತ್ಯ ಅಧ್ಯಕ್ಷ ಹೆರಾಲ್ಡ್ ತಾವ್ರೋ ಮೂಡಬಿದ್ರೆ, ವಿಶೇಷ ಅತಿಥಿಗಳಾಗಿ ಜೋಗಿ ಖ್ಯಾತಿಯ ಚಲನಚಿತ್ರ ನಟ ಪಟ್ರೆ ನಾಗರಾಜ್ ಬೆಂಗಳೂರು ಭಾಗವಹಿಸಲಿದ್ದಾರೆ.


ಸಂಜೆ ಭವ್ಯ ಮೆರವಣಿಗೆ, ಚಿಣ್ಣರ ಚಿಲಿಪಿಲಿ, ಹಾಡಿನ ಝೇಂಕಾರ, ಪೂರ್ವ ಅಧ್ಯಕ್ಷರಿಗೆ ಮತ್ತು ಸಾಧಕರಿಗೆ ಸನ್ಮಾನ. ತುಳು ಹಾಸ್ಯಮಯ ನಾಟಕ “ಪುದರ್ ದಿದಾಂಡ್” ಮುಂತಾದ ಕಾರ್ಯಕ್ರಮ ನಡೆಯಲಿದೆ.

Related posts

ನಾರಾವಿ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ನೂತನ ಸಮಿತಿ ರಚನೆ

Suddi Udaya

ಬಳಂಜ: ಅಡಿಕೆ ಇಳುವರಿ ಹಾಗೂ ಕರಾವಳಿಯ ಹುಳಿ ಮಣ್ಣಿನ ಮೇಲೆ ಡೋಲೋಮೈಟ್’ ನ ಪ್ರಭಾವದ ಕುರಿತು ಕ್ಷೇತ್ರ ಪರಿಶೀಲನೆಯ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ : ವಾಣಿ ಕಾಲೇಜಿನ ಸಾಹಿತ್ಯ ಕುಶಾಲ್ ಮತ್ತು ಸೃಜನ್ ಗೆ ಪ್ರಥಮ ಬಹುಮಾನ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಪುದುವೆಟ್ಟು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಿಎಂ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ, ಅಧಿಕಾರದ ಗದ್ದುಗೆಗೇರಿದ ಬಿಜೆಪಿ: ನೂತನ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾ,ಉಪಾಧ್ಯಕ್ಷ ಕಾಂತಪ್ಪ ಗೌಡ ಹಾಗೂ ನಿರ್ದೇಶಕರನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಗುರುವಾಯನಕೆರೆ: ಸುಧಾಕರ ನಾಯಕ್ ನಿಧನ

Suddi Udaya
error: Content is protected !!