July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿನಲ್ಲಿ ಯೋಗ ದಿನಾಚರಣೆ

ನಿಟ್ಟಡೆ : ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿನಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶಾಲಾ ಯೋಗ ತರಬೇತುದಾರರಾದ ಸತೀಶ್ ಆಚಾರ್ಯ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಮಾರ್ಗದರ್ಶನವನ್ನು ನೀಡಿ ಉತ್ತಮ ರೀತಿಯಲ್ಲಿ ಪ್ರಾಣಾಯಾಮ ಮತ್ತು ವಿವಿಧ ರೀತಿಯ ಆಸನಗಳನ್ನು ಮಾಡಿಸಿದರು .

ಶಾಲಾ ಸಂಚಾಲಕ ಗಿರೀಶ್ ಕೆಎಚ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಅಶ್ವಿತ್ ಕುಲಾಲ್ ಯೋಗಾಸನದಲ್ಲಿ ಪಾಲ್ಗೊಂಡಿದ್ದರು.

ಮುಖ್ಯ ಅತಿಥಿಯಾಗಿ ಗೋವರ್ಧನ್ ಹೆಚ್. ಸಿಎಸ್‌ಸಿ ಗೌವರ್ನೆನ್ಸ್ ಇಂಡಿಯನ್ ಸರ್ವಿಸಸ್ ಲಿಮಿಟೆಡ್ ಉಪಸ್ಥಿತರಿದ್ದು, ಯೋಗ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಓಮನ ಹಾಗೂ ಪವನ್ ಸೀನಿಯರ್ ಎಕ್ಸಿಕ್ಯೂಟಿವ್ ಎಸ್ ಬಿ ಐ ಜನರಲ್ ಇನ್ಸೂರೆನ್ಸ್ ಮಂಗಳೂರು ಮತ್ತು ಹರಿಣಾಕ್ಷಿ ಸಿ ಎ ಸ್ಸಿ ಸೆಂಟರ್ ನಾರಾವಿ ಉಪಸ್ಥಿತರಿದ್ದರು.

ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ವಾಣಿ ಯೋಗಾಸನದಿಂದ ಆಗುವ ಉಪಯೋಗವನ್ನು ತಿಳಿಸಿದರು. ಕಾರ್ಯಕ್ರಮವನ್ನು ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶ್ರೀಮತಿ ಸುಜಾತ ನಿರೂಪಿಸಿ, ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಅಕ್ಷತ ಸ್ವಾಗತಿಸಿ, ಕಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಪವಿತ್ರ ಧನ್ಯವಾದವಿತ್ತರು. ಎಲ್ಲಾ ಶಿಕ್ಷಕ, ಉಪನ್ಯಾಸಕ ವೃಂದದವರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.

Related posts

ಸೌಜನ್ಯ ಸಾವು ಪ್ರಕರಣ: ಸರಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಲಿ: ಡಾ. ಹೆಗ್ಗಡೆ

Suddi Udaya

ಬಜಿರೆ : ಹೊಸಪಟ್ಣ ನಿವಾಸಿ ಶ್ರೀಧರ ಪೂಜಾರಿ ನಿಧನ

Suddi Udaya

ಭತ್ತದ ತಳಿಗಳ ಸಂರಕ್ಷಕ ಬಿ.ಕೆ. ದೇವ ರಾವ್‌ಗೆ ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ರೈತ ಪ್ರಶಸ್ತಿ

Suddi Udaya

ರಾಷ್ಟ್ರೀಯ ಮಟ್ಟದ ಕರಕುಶಲ ಸ್ಪರ್ಧೆ: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಶ್ರೇಯಾ ಕೆ ಎಚ್ ಗೆ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವದಲ್ಲಿ ನಿರಂತರ ವಿವಿಧ ಭಜನಾ ತಂಡದಿಂದ ಭಜನಾ ಸೇವೆ

Suddi Udaya

ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ವರ್ಗಾವಣೆ: ನೂತನ ಡಿವೈಎಸ್ಪಿ ಆಗಿ ವಿಜಯ ಪ್ರಸಾದ್ ನೇಮಕ

Suddi Udaya
error: Content is protected !!