25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿನಲ್ಲಿ ಯೋಗ ದಿನಾಚರಣೆ

ನಿಟ್ಟಡೆ : ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿನಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶಾಲಾ ಯೋಗ ತರಬೇತುದಾರರಾದ ಸತೀಶ್ ಆಚಾರ್ಯ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಮಾರ್ಗದರ್ಶನವನ್ನು ನೀಡಿ ಉತ್ತಮ ರೀತಿಯಲ್ಲಿ ಪ್ರಾಣಾಯಾಮ ಮತ್ತು ವಿವಿಧ ರೀತಿಯ ಆಸನಗಳನ್ನು ಮಾಡಿಸಿದರು .

ಶಾಲಾ ಸಂಚಾಲಕ ಗಿರೀಶ್ ಕೆಎಚ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಅಶ್ವಿತ್ ಕುಲಾಲ್ ಯೋಗಾಸನದಲ್ಲಿ ಪಾಲ್ಗೊಂಡಿದ್ದರು.

ಮುಖ್ಯ ಅತಿಥಿಯಾಗಿ ಗೋವರ್ಧನ್ ಹೆಚ್. ಸಿಎಸ್‌ಸಿ ಗೌವರ್ನೆನ್ಸ್ ಇಂಡಿಯನ್ ಸರ್ವಿಸಸ್ ಲಿಮಿಟೆಡ್ ಉಪಸ್ಥಿತರಿದ್ದು, ಯೋಗ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಓಮನ ಹಾಗೂ ಪವನ್ ಸೀನಿಯರ್ ಎಕ್ಸಿಕ್ಯೂಟಿವ್ ಎಸ್ ಬಿ ಐ ಜನರಲ್ ಇನ್ಸೂರೆನ್ಸ್ ಮಂಗಳೂರು ಮತ್ತು ಹರಿಣಾಕ್ಷಿ ಸಿ ಎ ಸ್ಸಿ ಸೆಂಟರ್ ನಾರಾವಿ ಉಪಸ್ಥಿತರಿದ್ದರು.

ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ವಾಣಿ ಯೋಗಾಸನದಿಂದ ಆಗುವ ಉಪಯೋಗವನ್ನು ತಿಳಿಸಿದರು. ಕಾರ್ಯಕ್ರಮವನ್ನು ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶ್ರೀಮತಿ ಸುಜಾತ ನಿರೂಪಿಸಿ, ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಅಕ್ಷತ ಸ್ವಾಗತಿಸಿ, ಕಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಪವಿತ್ರ ಧನ್ಯವಾದವಿತ್ತರು. ಎಲ್ಲಾ ಶಿಕ್ಷಕ, ಉಪನ್ಯಾಸಕ ವೃಂದದವರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.

Related posts

ಅಥ್ಲೆಟಿಕ್ ಕ್ರೀಡಾಕೂಟ: ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾರಿಗೆ ಬೆಳ್ಳಿ ಪದಕ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ ಬಂಗೇರ ಕಾಶಿಪಟ್ಣ, ಉಪಾಧ್ಯಕ್ಷರಾಗಿ ಶ್ರೀಪತಿ ಉಪಾಧ್ಯಯ ಆಯ್ಕೆ

Suddi Udaya

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶ್ರೀಮತಿ ತಾರಾಕೇಸರಿ ನೇಮಕ

Suddi Udaya

ಬೆಳ್ತಂಗಡಿ ಸುವರ್ಣ ಆರ್ಕೆಡ್ ಕಟ್ಟಡದಲ್ಲಿ “ಹೊಟೇಲ್ ಸಮಡೈನ್” ಉದ್ಘಾಟನೆ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ: ಕಲಶಾಭಿಷೇಕ, ದರ್ಶನ ಬಲಿ

Suddi Udaya

ನ.10: ಬಳಂಜ -ನಾಲ್ಕೂರು – ತೆಂಕಕಾರಂದೂರು ಗ್ರಾಮದ ಪ್ರಮುಖ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಾರ್ವಜನಿಕ ಪ್ರಥಮ ವರ್ಷದ ಕೆಸರ್ದ ಲೇಸ್ ಬಲೇ ಗೊಬ್ಬುಗ

Suddi Udaya
error: Content is protected !!