30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಗತಿ ಆರಂಭ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಶ್ರೀ ಧ ಮಂ ಆಡಳಿತ ಮಂಡಳಿಯ ವತಿಯಿಂದ ಉಚಿತ ಯಕ್ಷಗಾನ ತರಗತಿಯು ಆರಂಭವಾಯಿತು. ವಾರದಲ್ಲಿ ಒಂದು ತರಗತಿಯು ನಿರಂತರವಾಗಿ ನಡೆಯಲಿದ್ದು, ಇದರ ಉದ್ಘಾಟನೆಯನ್ನು ನೆರವೇರಿಸಿದ ಬೆಳಾಲು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ದಾಮೋದರ ಗೌಡ ಸುರುಳಿಯವರು ಮಾತನಾಡುತ್ತಾ, ಯಕ್ಷಗಾನ ಕಲಿಕೆಯ ಮೂಲಕ ನಮ್ಮ ಪುರಾಣಗಳ ಬಗ್ಗೆ ತಿಳುವಳಿಕೆಯೊಂದಿಗೆ, ಜೀವನ ಮೌಲ್ಯಗಳ ಅರಿವಿನೊಂದಿಗೆ ಸಂಸ್ಕೃತಿಯ ಪರಿಚಯ ಮತ್ತು ಸಂಸ್ಕಾರವೂ ಸಿಗಲಿದೆಯೆಂದು ಅಭಿಪ್ರಾಯಪಟ್ಟರು.

ಸಮಾರಂಭದ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರು ವಹಿಸಿದ್ದರು. ಯಕ್ಷಗಾನ ನಾಟ್ಯ ಗುರುಗಳಾಗಿ ಖ್ಯಾತ ಯಕ್ಷಗಾನ ಕಲಾವಿದರಾದ ಪಿ. ಲಕ್ಷ್ಮಣ ಗೌಡರವರು ತರಬೇತಿಯನ್ನು ನೀಡಲಿದ್ದಾರೆ. ವೇದಿಕೆಯಲ್ಲಿ ಶಿಕ್ಷಕ ಸಿಬ್ಬಂದಿಗಳೆಲ್ಲರು ಉಪಸ್ಥಿತರಿದ್ದರು.

ನಾಟ್ಯ ತರಗತಿಯ ವಿದ್ಯಾರ್ಥಿಗಳಾದ ಕು. ಅಶ್ವಿನಿ ಸ್ವಾಗತಿಸಿ, ಕೀರ್ತಿ ವಂದಿಸಿದರು, ಕು. ಅಂಕಿತಾ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘಕ್ಕೆ ರೂ.ಒಂದು ಲಕ್ಷ ದೇಣಿಗೆ

Suddi Udaya

ಉಜಿರೆ :ಸಿದ್ದವನ ಗುರುಕುಲದ ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಕೊಯ್ಯೂರು ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಕುತ್ಲೂರು ಸರಕಾರಿ ಉನ್ನತೀಕರಿಸಿದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಬಳ್ಳಮಂಜ ವಡ್ಡದಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ದೈವಗಳ ನೇಮೋತ್ಸವ

Suddi Udaya

ಉಜಿರೆಯಲ್ಲಿ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಸಭೆ : ಕೆ.ಪಿ.ಸಿ.ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್‌ ಭಾಗಿ

Suddi Udaya
error: Content is protected !!