25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಗತಿ ಆರಂಭ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಶ್ರೀ ಧ ಮಂ ಆಡಳಿತ ಮಂಡಳಿಯ ವತಿಯಿಂದ ಉಚಿತ ಯಕ್ಷಗಾನ ತರಗತಿಯು ಆರಂಭವಾಯಿತು. ವಾರದಲ್ಲಿ ಒಂದು ತರಗತಿಯು ನಿರಂತರವಾಗಿ ನಡೆಯಲಿದ್ದು, ಇದರ ಉದ್ಘಾಟನೆಯನ್ನು ನೆರವೇರಿಸಿದ ಬೆಳಾಲು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ದಾಮೋದರ ಗೌಡ ಸುರುಳಿಯವರು ಮಾತನಾಡುತ್ತಾ, ಯಕ್ಷಗಾನ ಕಲಿಕೆಯ ಮೂಲಕ ನಮ್ಮ ಪುರಾಣಗಳ ಬಗ್ಗೆ ತಿಳುವಳಿಕೆಯೊಂದಿಗೆ, ಜೀವನ ಮೌಲ್ಯಗಳ ಅರಿವಿನೊಂದಿಗೆ ಸಂಸ್ಕೃತಿಯ ಪರಿಚಯ ಮತ್ತು ಸಂಸ್ಕಾರವೂ ಸಿಗಲಿದೆಯೆಂದು ಅಭಿಪ್ರಾಯಪಟ್ಟರು.

ಸಮಾರಂಭದ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರು ವಹಿಸಿದ್ದರು. ಯಕ್ಷಗಾನ ನಾಟ್ಯ ಗುರುಗಳಾಗಿ ಖ್ಯಾತ ಯಕ್ಷಗಾನ ಕಲಾವಿದರಾದ ಪಿ. ಲಕ್ಷ್ಮಣ ಗೌಡರವರು ತರಬೇತಿಯನ್ನು ನೀಡಲಿದ್ದಾರೆ. ವೇದಿಕೆಯಲ್ಲಿ ಶಿಕ್ಷಕ ಸಿಬ್ಬಂದಿಗಳೆಲ್ಲರು ಉಪಸ್ಥಿತರಿದ್ದರು.

ನಾಟ್ಯ ತರಗತಿಯ ವಿದ್ಯಾರ್ಥಿಗಳಾದ ಕು. ಅಶ್ವಿನಿ ಸ್ವಾಗತಿಸಿ, ಕೀರ್ತಿ ವಂದಿಸಿದರು, ಕು. ಅಂಕಿತಾ ಕಾರ್ಯಕ್ರಮ ನಿರೂಪಿಸಿದರು.

Related posts

ಕಾಯರ್ತಡ್ಕ ಪ್ರೌಢಶಾಲೆಗೆ ಶೌಚಾಲಯ ಹಸ್ತಾಂತರ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸಿ.ಎಂ. ಸಿದ್ದರಾಮಯ್ಯರವರ ಬಗ್ಗೆ ಅಶ್ಲೀಲ ಆಡಿಯೋ ವೈರಲ್: ರಜಿತ್ ಕೊಕ್ಕಡ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಡ ಸರಕಾರಿ ಪ್ರೌಢಶಾಲೆಗೆ “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲಾ ಪ್ರಶಸ್ತಿ

Suddi Udaya

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನೇತೃತ್ವದಲ್ಲಿ ನೆರಿಯ ಸಂತ ಥೋಮಸ್ ಅ.ಪ್ರೌ. ಶಾಲೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ

Suddi Udaya
error: Content is protected !!