24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಮುಂಡಾಜೆ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಮುಂಡಾಜೆ: ಮುಂಡಾಜೆ ಪ್ರೌಢಶಾಲೆ ಮುಂಡಾಜೆ ಇಲ್ಲಿ ಜೂ.21 ರಂದು ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಸಂಸ್ಥೆಯ ಅಧ್ಯಾಪಕ ಆನಂದ ಜಿ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮನುಷ್ಯನಲ್ಲಿ ಮಾನಸಿಕ ಮತ್ತು ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುವಲ್ಲಿ ಯೋಗವು ಸಹಕಾರಿಯಾಗಿದೆ ಎಂದು ತಿಳಿಸಿ ಪ್ರತಿದಿನ ಯೋಗವನ್ನು ಮಾಡುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಸಂಸ್ಥೆಯ ಮುಖ್ಯ ಶಿಕ್ಷಕಿ ಶ್ರೀಮತಿ ಜಯಂತಿ ಟಿ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಪ್ರತಿದಿನ ಯೋಗಾಸನಗಳನ್ನು ಮಾಡುತ್ತಾ ಆರೋಗ್ಯವಂತರಾಗಿ ಎಂದು ಶುಭ ಹಾರೈಸಿದರು.

ನಂತರ ವಿದ್ಯಾರ್ಥಿಗಳಿಂದ ಯೋಗ ಪ್ರಾತ್ಯಕ್ಷಿಕೆ ನಡೆಯಿತು ಯೋಗ ಪ್ರಾತ್ಯಕ್ಷಿಕೆಯನ್ನು ದೈಹಿಕ ಶಿಕ್ಷಣ ಶಿಕ್ಷಕ ಗುಣಪಾಲ್ ಎಂ ಎಸ್ ಇವರು ನಿರ್ವಹಿಸಿದರು. ಶಿಕ್ಷಕಿಯರಾದ ಶ್ರೀಮತಿ ಪಾರ್ವತಿ ಯು. ಶ್ರೀಮತಿ ಬಿ ಸಹನಾ. ಶ್ರೀಮತಿ ಪದ್ಮಲತಾ, ಶ್ರೀಮತಿ ವಿಜಯಲಕ್ಷ್ಮಿ , ಶ್ರೀಮತಿ ಗೀತಾ ಸಹಕರಿಸಿದರು.

Related posts

ಬೆಳ್ತಂಗಡಿ ಮಾರಿಗುಡಿಯಲ್ಲಿ ಶಾಸಕ ಹರೀಶ್ ಪೂಂಜ ಪ್ರಮಾಣ: ನಾನು ಯಾರಿಂದಲೂ ಹಣವನ್ನು ಪಡೆದಿಲ್ಲ, ಭ್ರಷ್ಟಾಚಾರ ನಡೆಸಿಲ್ಲ: ದೀಪ ಬೆಳಗಿಸಿ, ಮಾರಿಗುಡಿ ಎದುರು ತೆಂಗಿನ ಕಾಯಿ ಒಡೆದು ಪ್ರಮಾಣ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ನಡ: ರಸ್ತೆಯ ನದಿಗೆ ನಿರ್ಮಿಸಲಾದ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ನಿರ್ಮಿಸಲಾಗಿದ್ದ ಕಾಂಪೌಂಡ್ ಕುಸಿತ

Suddi Udaya

ಪಡಂಗಡಿ ಸರ್ಕಾರಿ ಪ್ರೌಢ ಶಾಲಾ ನೂತನ ಕಟ್ಟಡ ಲೋಕಾರ್ಪಣೆ

Suddi Udaya

ಪಡಂಗಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಪುತ್ತೂರಿನಲ್ಲಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಮತ್ತು ಶಶಿಕುಮಾರ್ ರೈ ಬಾಲ್ಯೋಟ್ಟುರವರಿಗೆ ಅಭಿವಂದನಾ ಕಾರ್ಯಕ್ರಮ

Suddi Udaya
error: Content is protected !!