ಶಾಲಾ ಬೇಡಿಕೆಗೆ ರಕ್ಷಿತ್ ಶಿವರಾಂ ಸ್ಪಂದನೆ: ಕಲ್ಲೇರಿ ಶಾಲೆಯಲ್ಲಿ ನೂತನ ಶೌಚಾಯ ನಿರ್ಮಾಣ

Suddi Udaya

ಬೆಳ್ತಂಗಡಿ: ರಕ್ಷಿತ್ ಶಿವರಾಂ ಅವರ ಪ್ರಯತ್ನದಿಂದ ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ಅವರು ಮಂಜೂರುಗೊಳಿಸಿದ ರೂ.2 ಲಕ್ಷ ಅನುದಾನದಲ್ಲಿ ಕಲ್ಲೇರಿ ಕಿರಿಯ ಪ್ರಾಥಮಿಕ ಶಾಲೆಯ ಹಲವು ವರ್ಷಗಳ ಬೇಡಿಕೆಯಾದ ನೂತನ ಶೌಚಾಲಯವನ್ನು ನಿರ್ಮಿಸಲಾಗಿದೆ.

ಕಲ್ಲೇರಿ ಕಿರಿಯ ಪ್ರಾಥಮಿಕ ಶಾಲೆಯ ಅಧ್ಯಾಪಕ ವೃಂದ, ಅಭಿವೃದ್ದಿ ಸಮಿತಿ ಕೊನೆಗೆ ಕಳೆದ ವರ್ಷ ಶಾಲಾ ವಾರ್ಷಿಕ ದಿನದಂದು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ರಕ್ಷಿತ್ ಶಿವರಾಂರವರಿಗೆ ಶಾಲಾ ಮುಖ್ಯೋಪಾಧ್ಯಾಯರು, ಸಮಿತಿ ಹಾಗೂ ಊರವರು ಸೇರಿಕೊಂಡು ತಮ್ಮ ಶಾಲಾ ಮಕ್ಕಳಿಗೆ ಶೌಚಾಲಯ ಇಲ್ಲದೆ ಎದುರಿಸುತ್ತಿರುವ ಸಮಸ್ಯೆಯನ್ನು ಮನವಿ ಪತ್ರದ ಮೂಲಕ ತಿಳಿಸಿದ್ದರು.
ಕೂಡಲೇ ರಕ್ಷಿತ್ ಶಿವರಾಂ ಅವರು ವಿಧಾನ ಪರಿಷತ್ ಸದಸ್ಯರಾದ ಹರಿಪ್ರಸಾದ್ ಅವರ ಗಮನಕ್ಕೆ ತಂದಾಗ, ಇದಕ್ಕೆ ಸ್ಪಂದಿಸಿ, ತಮ್ಮ ವಿಧಾನ ಪರಿಷತ್ ನಿಧಿಯಿಂದ ಸುಮಾರು ರೂ. 2ಲಕ್ಷ ಅನುದಾನ ಮಂಜೂರುಗೊಳಿಸಿದ್ದು, ಈಗಾಗಲೇ ಕಟ್ಟಡ ಸಂಪೂರ್ಣಗೊಂಡು ಶಾಲೆಯ ಬೇಡಿಕೆ ಈಡೇರಿದೆ. ಶಾಲೆಯ ಬೇಡಿಕೆ ಈಡೇರಿಸಿದ ರಕ್ಷಿತ್ ಶಿವರಾಂ ಅವರಿಗೆ ಊರವರು ಕೃತಜ್ಞತೆ ಸಲ್ಲಿಸಿದ್ದಾರೆ.

Leave a Comment

error: Content is protected !!