April 2, 2025
ಗ್ರಾಮಾಂತರ ಸುದ್ದಿ

ಶಾಲಾ ಬೇಡಿಕೆಗೆ ರಕ್ಷಿತ್ ಶಿವರಾಂ ಸ್ಪಂದನೆ: ಕಲ್ಲೇರಿ ಶಾಲೆಯಲ್ಲಿ ನೂತನ ಶೌಚಾಯ ನಿರ್ಮಾಣ

ಬೆಳ್ತಂಗಡಿ: ರಕ್ಷಿತ್ ಶಿವರಾಂ ಅವರ ಪ್ರಯತ್ನದಿಂದ ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ಅವರು ಮಂಜೂರುಗೊಳಿಸಿದ ರೂ.2 ಲಕ್ಷ ಅನುದಾನದಲ್ಲಿ ಕಲ್ಲೇರಿ ಕಿರಿಯ ಪ್ರಾಥಮಿಕ ಶಾಲೆಯ ಹಲವು ವರ್ಷಗಳ ಬೇಡಿಕೆಯಾದ ನೂತನ ಶೌಚಾಲಯವನ್ನು ನಿರ್ಮಿಸಲಾಗಿದೆ.

ಕಲ್ಲೇರಿ ಕಿರಿಯ ಪ್ರಾಥಮಿಕ ಶಾಲೆಯ ಅಧ್ಯಾಪಕ ವೃಂದ, ಅಭಿವೃದ್ದಿ ಸಮಿತಿ ಕೊನೆಗೆ ಕಳೆದ ವರ್ಷ ಶಾಲಾ ವಾರ್ಷಿಕ ದಿನದಂದು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ರಕ್ಷಿತ್ ಶಿವರಾಂರವರಿಗೆ ಶಾಲಾ ಮುಖ್ಯೋಪಾಧ್ಯಾಯರು, ಸಮಿತಿ ಹಾಗೂ ಊರವರು ಸೇರಿಕೊಂಡು ತಮ್ಮ ಶಾಲಾ ಮಕ್ಕಳಿಗೆ ಶೌಚಾಲಯ ಇಲ್ಲದೆ ಎದುರಿಸುತ್ತಿರುವ ಸಮಸ್ಯೆಯನ್ನು ಮನವಿ ಪತ್ರದ ಮೂಲಕ ತಿಳಿಸಿದ್ದರು.
ಕೂಡಲೇ ರಕ್ಷಿತ್ ಶಿವರಾಂ ಅವರು ವಿಧಾನ ಪರಿಷತ್ ಸದಸ್ಯರಾದ ಹರಿಪ್ರಸಾದ್ ಅವರ ಗಮನಕ್ಕೆ ತಂದಾಗ, ಇದಕ್ಕೆ ಸ್ಪಂದಿಸಿ, ತಮ್ಮ ವಿಧಾನ ಪರಿಷತ್ ನಿಧಿಯಿಂದ ಸುಮಾರು ರೂ. 2ಲಕ್ಷ ಅನುದಾನ ಮಂಜೂರುಗೊಳಿಸಿದ್ದು, ಈಗಾಗಲೇ ಕಟ್ಟಡ ಸಂಪೂರ್ಣಗೊಂಡು ಶಾಲೆಯ ಬೇಡಿಕೆ ಈಡೇರಿದೆ. ಶಾಲೆಯ ಬೇಡಿಕೆ ಈಡೇರಿಸಿದ ರಕ್ಷಿತ್ ಶಿವರಾಂ ಅವರಿಗೆ ಊರವರು ಕೃತಜ್ಞತೆ ಸಲ್ಲಿಸಿದ್ದಾರೆ.

Related posts

ಬೆಳ್ತಂಗಡಿ ಪ.ಪಂ. ನಾಮ ನಿರ್ದೇಶಿತ ಸದಸ್ಯರಾಗಿ ಹೆನ್ರಿ ಲೋಬೊ ಆಯ್ಕೆ

Suddi Udaya

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನ ವತಿಯಿಂದ ವೈದ್ಯಕೀಯ ನೆರವು

Suddi Udaya

ಗೇರುಕಟ್ಟೆ: ಹಿದಾಯ ತುಸ್ಸಿಬಿಯಾನ್ ಮದರಸದಲ್ಲಿ ಈದ್ ಮಿಲಾದ್ ಪ್ರಯುಕ್ತ ಮದರಸ ಮಕ್ಕಳ ಕಲಾ ಕಲರವ ಕಾರ್ಯಕ್ರಮ “ಎಂಬ್ರೆಝ್ ಮದೀನಾ”

Suddi Udaya

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಿಂದ ಹೊಗೆ ಮನೆಗೆ ಬೆಂಕಿ‌ ಬಿದ್ದು ನಷ್ಟ ಅನುಭವಿಸಿದ ಕಿನ್ನಿ ಗೌಡರಿಗೆ ಪರಿಹಾರ ನಿಧಿ ಹಸ್ತಾಂತರ

Suddi Udaya

ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ ಶ್ರದ್ಧಾಂಜಲಿ

Suddi Udaya
error: Content is protected !!