September 7, 2026
ಗ್ರಾಮಾಂತರ ಸುದ್ದಿ

ಶಾಲಾ ಬೇಡಿಕೆಗೆ ರಕ್ಷಿತ್ ಶಿವರಾಂ ಸ್ಪಂದನೆ: ಕಲ್ಲೇರಿ ಶಾಲೆಯಲ್ಲಿ ನೂತನ ಶೌಚಾಯ ನಿರ್ಮಾಣ

ಬೆಳ್ತಂಗಡಿ: ರಕ್ಷಿತ್ ಶಿವರಾಂ ಅವರ ಪ್ರಯತ್ನದಿಂದ ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ಅವರು ಮಂಜೂರುಗೊಳಿಸಿದ ರೂ.2 ಲಕ್ಷ ಅನುದಾನದಲ್ಲಿ ಕಲ್ಲೇರಿ ಕಿರಿಯ ಪ್ರಾಥಮಿಕ ಶಾಲೆಯ ಹಲವು ವರ್ಷಗಳ ಬೇಡಿಕೆಯಾದ ನೂತನ ಶೌಚಾಲಯವನ್ನು ನಿರ್ಮಿಸಲಾಗಿದೆ.

ಕಲ್ಲೇರಿ ಕಿರಿಯ ಪ್ರಾಥಮಿಕ ಶಾಲೆಯ ಅಧ್ಯಾಪಕ ವೃಂದ, ಅಭಿವೃದ್ದಿ ಸಮಿತಿ ಕೊನೆಗೆ ಕಳೆದ ವರ್ಷ ಶಾಲಾ ವಾರ್ಷಿಕ ದಿನದಂದು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ರಕ್ಷಿತ್ ಶಿವರಾಂರವರಿಗೆ ಶಾಲಾ ಮುಖ್ಯೋಪಾಧ್ಯಾಯರು, ಸಮಿತಿ ಹಾಗೂ ಊರವರು ಸೇರಿಕೊಂಡು ತಮ್ಮ ಶಾಲಾ ಮಕ್ಕಳಿಗೆ ಶೌಚಾಲಯ ಇಲ್ಲದೆ ಎದುರಿಸುತ್ತಿರುವ ಸಮಸ್ಯೆಯನ್ನು ಮನವಿ ಪತ್ರದ ಮೂಲಕ ತಿಳಿಸಿದ್ದರು.
ಕೂಡಲೇ ರಕ್ಷಿತ್ ಶಿವರಾಂ ಅವರು ವಿಧಾನ ಪರಿಷತ್ ಸದಸ್ಯರಾದ ಹರಿಪ್ರಸಾದ್ ಅವರ ಗಮನಕ್ಕೆ ತಂದಾಗ, ಇದಕ್ಕೆ ಸ್ಪಂದಿಸಿ, ತಮ್ಮ ವಿಧಾನ ಪರಿಷತ್ ನಿಧಿಯಿಂದ ಸುಮಾರು ರೂ. 2ಲಕ್ಷ ಅನುದಾನ ಮಂಜೂರುಗೊಳಿಸಿದ್ದು, ಈಗಾಗಲೇ ಕಟ್ಟಡ ಸಂಪೂರ್ಣಗೊಂಡು ಶಾಲೆಯ ಬೇಡಿಕೆ ಈಡೇರಿದೆ. ಶಾಲೆಯ ಬೇಡಿಕೆ ಈಡೇರಿಸಿದ ರಕ್ಷಿತ್ ಶಿವರಾಂ ಅವರಿಗೆ ಊರವರು ಕೃತಜ್ಞತೆ ಸಲ್ಲಿಸಿದ್ದಾರೆ.

Related posts

ಬಳಂಜ: ಮುಂದುವರಿದ ಭಾರಿ ಮಳೆ,ಅಟ್ಲಾಜೆ-ಬದಿನಡೆ,ಪೊಯ್ಯೆಗುಡ್ಡೆ ಮಣ್ಣಿನ ರಸ್ತೆ ಕೆಸರುಮಯ: ಸಾರ್ವಜನಿಕರು ನಡೆಯಲಾಗದ ಪರಿಸ್ಥಿತಿ ನಿರ್ಮಾಣ,ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya

ಮಿತ್ತಬಾಗಿಲು: ಹಿರಿಯ ದೈವನರ್ತಕ ಅಣ್ಣು ನಲಿಕೆ ನಿಧನ

Suddi Udaya

11ನೇ ಶತಮಾನ ಕ್ರಿ.ಶ. 1260 ರಲ್ಲಿ ನಿರ್ಮಾಣವಾದ ಕ್ಷೇತ್ರ: ಮೇ 3ರಿಂದ ನಾರಾವಿ ಬಸದಿಯ ಧಾಮ ಸಂಪ್ರೋಕ್ಷಣೆ

Suddi Udaya

ಹೊಸ್ಮಾರು ಸಿದ್ಧರವನ ಕ್ಷೇತ್ರದಲ್ಲಿ ಪೂಜ್ಯ ಮುಕ್ತಿಮತಿ ಮಾತಾಜಿ ಚಾತುರ್ಮಾಸ್ಯ

Suddi Udaya

ಅಳದಂಗಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!