July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಸಭೆ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಸಭೆ ನಡೆಯಿತು.

ಮುಖ್ಯ ಅತಿಥಿಗಳಾಗಿ ಉಜಿರೆ ಎಸ್. ಡಿ.ಎಮ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ಕ್ಷೇಮ ಪಾಲನ ಅಧಿಕಾರಿ ಧನ್ಯಕುಮಾರ್. ಎಂ ಇವರು ಪೋಷಕರನ್ನು ಉದ್ದೇಶಿಸಿ ಮಾತನಾಡಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಪಾತ್ರ ಹಾಗೂ ಶಿಕ್ಷಕರ ಪಾತ್ರವನ್ನು ವಿವರಿಸುತ್ತಾ, ವಿದ್ಯಾರ್ಥಿಗಳಲ್ಲಿ ಮೊಬೈಲ್ ಬಳಕೆಯನ್ನು ಕಡಿಮೆಗೊಳಿಸಿ ನೈತಿಕ ಮೌಲ್ಯಗಳನ್ನು ಹೆಚ್ಚಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯವಾದದ್ದು ಎಂದು ವಿವರಿಸಿದರು.

ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ವಿದ್ಯಾಲಕ್ಷ್ಮಿ ನಾಯಕ್ ಮಾತನಾಡಿ ಪ್ರಸ್ತುತ ಶೈಕ್ಷಣಿಕ ರೀತಿ ನೀತಿಗಳು ಹಾಗೂ ಶಾಲೆಯಲ್ಲಿ ನಡೆಯುವ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳನ್ನು ವಿವರಿಸಿ, ಪೋಷಕರ ಅಹವಾಲುಗಳನ್ನು ವಿಮರ್ಶಿಸಿದರು.

ಶಿಕ್ಷಕಿಯಾದ ಶ್ರೀಮತಿ ಶಶಿಪ್ರಭ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ಧನ್ಯವತಿ ಅತಿಥಿ ಪರಿಚಯ ಮಾಡಿದರು. ಶಿಕ್ಷಕರಾದ ಹರೀಶ್ ಭಟ್ ಸ್ವಾಗತಿಸಿ, ರಾಘವೇಂದ್ರ ವಂದಿಸಿದರು.

Related posts

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಿನಿ-ಅನ್ವೇಷಣಾ-2024

Suddi Udaya

ಮಾಲಾಡಿ ಸ.ಹಿ.ಪ್ರಾ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ “ವಾಕ್-ಇನ್ ವಿದ್ವತ್” – ಎ ಸ್ಟೆಪ್ ಇಂಟು ಸಕ್ಸಸ್” ಕಾರ್ಯಕ್ರಮದ ಲೋಗೋ ಅನಾವರಣ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಮದ್ರಸ ಪಬ್ಲಿಕ್ ಪರೀಕ್ಷೆ: ಕುಂಟಿನಿ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸಕ್ಕೆ ಶೇ.100 ಫಲಿತಾಂಶ

Suddi Udaya

ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!