23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಸಭೆ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಸಭೆ ನಡೆಯಿತು.

ಮುಖ್ಯ ಅತಿಥಿಗಳಾಗಿ ಉಜಿರೆ ಎಸ್. ಡಿ.ಎಮ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ಕ್ಷೇಮ ಪಾಲನ ಅಧಿಕಾರಿ ಧನ್ಯಕುಮಾರ್. ಎಂ ಇವರು ಪೋಷಕರನ್ನು ಉದ್ದೇಶಿಸಿ ಮಾತನಾಡಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಪಾತ್ರ ಹಾಗೂ ಶಿಕ್ಷಕರ ಪಾತ್ರವನ್ನು ವಿವರಿಸುತ್ತಾ, ವಿದ್ಯಾರ್ಥಿಗಳಲ್ಲಿ ಮೊಬೈಲ್ ಬಳಕೆಯನ್ನು ಕಡಿಮೆಗೊಳಿಸಿ ನೈತಿಕ ಮೌಲ್ಯಗಳನ್ನು ಹೆಚ್ಚಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯವಾದದ್ದು ಎಂದು ವಿವರಿಸಿದರು.

ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ವಿದ್ಯಾಲಕ್ಷ್ಮಿ ನಾಯಕ್ ಮಾತನಾಡಿ ಪ್ರಸ್ತುತ ಶೈಕ್ಷಣಿಕ ರೀತಿ ನೀತಿಗಳು ಹಾಗೂ ಶಾಲೆಯಲ್ಲಿ ನಡೆಯುವ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳನ್ನು ವಿವರಿಸಿ, ಪೋಷಕರ ಅಹವಾಲುಗಳನ್ನು ವಿಮರ್ಶಿಸಿದರು.

ಶಿಕ್ಷಕಿಯಾದ ಶ್ರೀಮತಿ ಶಶಿಪ್ರಭ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ಧನ್ಯವತಿ ಅತಿಥಿ ಪರಿಚಯ ಮಾಡಿದರು. ಶಿಕ್ಷಕರಾದ ಹರೀಶ್ ಭಟ್ ಸ್ವಾಗತಿಸಿ, ರಾಘವೇಂದ್ರ ವಂದಿಸಿದರು.

Related posts

ಪುದುವೆಟ್ಟು ಶ್ರೀ ಧ.ಮಂ ಅ.ಹಿ.ಪ್ರಾ.ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಆಕಾಂಕ್ಷ ಎಲ್. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಉಜಿರೆ: ಹೊಳೆಯಂತಾದ ಉಜಿರೆ ಹಳೆಪೇಟೆ ರಸ್ತೆ, ಹಲವೆಡೆ ಅಂಗಡಿಗೆ ನುಗ್ಗಿದ ನೀರು, ಶಾಶ್ವತ ಪರಿಹಾರಕ್ಕೆ ಆಗ್ರಹ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಮೊಟ್ಟೆ ಕೋಳಿ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿಯಲ್ಲಿ ಜನೌಷಧಿ ಕೇಂದ್ರ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ನಾಲ್ಕೂರು: ಬಿಜೆಪಿ ಬೂತ್ ಸಮಿತಿಯ ನೂತನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಜೈಮಾತಾ ಕಾರ್ಯದರ್ಶಿಯಾಗಿ‌ ಸಂದೇಶ್ ಶೆಟ್ಟಿ ರಾಮನಗರ ಆಯ್ಕೆ

Suddi Udaya
error: Content is protected !!