25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಆಸ್ಪತ್ರೆ, ಬೆಳ್ತಂಗಡಿ ಲಯನ್ಸ್ ಸೇವಾ ಸಂಸ್ಥೆ, ಲಿಯೋ ಕ್ಲಬ್ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬೆಳಾಲು: ಹತ್ತನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಶ್ರೀ ಮಾಯಾಮಹದೇವ ದೇವಸ್ಥಾನ ಬೆಳಾಲು ವಠಾರದಲ್ಲಿ ಜೂ 07 ರಿಂದ 15 ದಿನಗಳ ಕಾಲ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಆಸ್ಪತ್ರೆ ಉಜಿರೆ, ಅಂತರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆ ಬೆಳ್ತಂಗಡಿ, ಲಿಯೋ ಕ್ಲಬ್ ಬೆಳ್ತಂಗಡಿ ಸಹಯೋಗದಲ್ಲಿ ನಡೆದ ಯೋಗ ತರಬೇತಿ ಶಿಬಿರ ಜೂ.21 ರಂದು ಸಮಾರೋಪಗೊಂಡಿತು.

ಯೋಗ ತರಬೇತಿ ನೀಡಿದ ಕು| ದೀಪ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಮಹತ್ವವನ್ನು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಸದಸ್ಯ ಲ. ಚಂದ್ರ ಕುಮಾರ್ ಶೆಟ್ಟಿ ನಾರ್ಯ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಯೋಗಾಸನ ತರಬೇತಿ ಶಿಬಿರದಲ್ಲಿ ಪಾಲ್ಗೊಂಡಿರುವ ಎಲ್ಲರಿಗೂ ಶುಭಾಶಯ ಕೋರುತ್ತಾ ಯೋಗದಿಂದ ಆರೋಗ್ಯವಂತ ಜೀವನ ನಿಮ್ಮದಾಗಲಿ ಎಂದು ತಿಳಿಸಿದರು.

ವೇದಿಕೆಯಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ನ ನಿಕಟಪೂರ್ವ ಅಧ್ಯಕ್ಷ ಲ. ಡಾ. ದೇವಿಪ್ರಸಾದ್ ಬೊಲ್ಮ, ಲಿಯೋ ಕ್ಲಬ್ ನ ಕಾರ್ಯಕ್ರಮ ಸಂಯೋಜಕರಾದ ಲಿಯೋ ಗ್ಲೆನ್ ಉಪಸ್ಥಿತರಿದ್ದರು. ಯೋಗ ತರಬೇತಿ ನೀಡಿದ ಎಸ್ ಡಿ ಎಮ್ ಯೋಗ ವಿಜ್ಞಾನಿಗಳ ಕಾಲೇಜಿನ ಕು. ದೀಪ ಇವರನ್ನು ಶಿಬಿರಾರ್ಥಿಗಳ ಪರವಾಗಿ ಗೌರವಿಸಲಾಯಿತು. ಯೋಗ ತರಬೇತಿ ಶಿಬಿರದಲ್ಲಿ ಭಾಗವಹಿಸಿದ ಎಲ್ಲರಿಗೂ ಭಾರತ ಸಂವಿಧಾನದ ಅರಿವು ಪುಸ್ತಕವನ್ನು ನೀಡಲಾಯಿತು.

Related posts

ವಾಣಿ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ನೇಜಿ ನಾಟಿ

Suddi Udaya

ಜಯರಾಮ್ ಮೊಂಟೆತಡ್ಕರವರಿಂದ ಶಿಬಾಜೆ ಶಾಲೆಗೆ ಪ್ರಿಂಟರ್ ಕೊಡುಗೆ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ತರಬೇತಿ

Suddi Udaya

ಕೊಯ್ಯೂರು ಹಿಂದೂ ರುದ್ರ ಭೂಮಿಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಯಶವಂತ ಗೌಡ ಪೂರ್ಯಾಳ ಆಯ್ಕೆ

Suddi Udaya

ಅರಸಿನಮಕ್ಕಿ : ಪರಿಸರ ಜಾಗೃತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ಗಿರೀಶ್ ಮಟ್ಟಣ್ಣನವರ್ ಆಕ್ಷೇಪಾರ್ಹ ಹೇಳಿಕೆ: ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗಕ್ಕೆ  ಹೈಕೋರ್ಟ್ ಸೂಚನೆ

Suddi Udaya
error: Content is protected !!