25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಆಸ್ಪತ್ರೆ, ಬೆಳ್ತಂಗಡಿ ಲಯನ್ಸ್ ಸೇವಾ ಸಂಸ್ಥೆ, ಲಿಯೋ ಕ್ಲಬ್ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬೆಳಾಲು: ಹತ್ತನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಶ್ರೀ ಮಾಯಾಮಹದೇವ ದೇವಸ್ಥಾನ ಬೆಳಾಲು ವಠಾರದಲ್ಲಿ ಜೂ 07 ರಿಂದ 15 ದಿನಗಳ ಕಾಲ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಆಸ್ಪತ್ರೆ ಉಜಿರೆ, ಅಂತರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆ ಬೆಳ್ತಂಗಡಿ, ಲಿಯೋ ಕ್ಲಬ್ ಬೆಳ್ತಂಗಡಿ ಸಹಯೋಗದಲ್ಲಿ ನಡೆದ ಯೋಗ ತರಬೇತಿ ಶಿಬಿರ ಜೂ.21 ರಂದು ಸಮಾರೋಪಗೊಂಡಿತು.

ಯೋಗ ತರಬೇತಿ ನೀಡಿದ ಕು| ದೀಪ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಮಹತ್ವವನ್ನು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಸದಸ್ಯ ಲ. ಚಂದ್ರ ಕುಮಾರ್ ಶೆಟ್ಟಿ ನಾರ್ಯ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಯೋಗಾಸನ ತರಬೇತಿ ಶಿಬಿರದಲ್ಲಿ ಪಾಲ್ಗೊಂಡಿರುವ ಎಲ್ಲರಿಗೂ ಶುಭಾಶಯ ಕೋರುತ್ತಾ ಯೋಗದಿಂದ ಆರೋಗ್ಯವಂತ ಜೀವನ ನಿಮ್ಮದಾಗಲಿ ಎಂದು ತಿಳಿಸಿದರು.

ವೇದಿಕೆಯಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ನ ನಿಕಟಪೂರ್ವ ಅಧ್ಯಕ್ಷ ಲ. ಡಾ. ದೇವಿಪ್ರಸಾದ್ ಬೊಲ್ಮ, ಲಿಯೋ ಕ್ಲಬ್ ನ ಕಾರ್ಯಕ್ರಮ ಸಂಯೋಜಕರಾದ ಲಿಯೋ ಗ್ಲೆನ್ ಉಪಸ್ಥಿತರಿದ್ದರು. ಯೋಗ ತರಬೇತಿ ನೀಡಿದ ಎಸ್ ಡಿ ಎಮ್ ಯೋಗ ವಿಜ್ಞಾನಿಗಳ ಕಾಲೇಜಿನ ಕು. ದೀಪ ಇವರನ್ನು ಶಿಬಿರಾರ್ಥಿಗಳ ಪರವಾಗಿ ಗೌರವಿಸಲಾಯಿತು. ಯೋಗ ತರಬೇತಿ ಶಿಬಿರದಲ್ಲಿ ಭಾಗವಹಿಸಿದ ಎಲ್ಲರಿಗೂ ಭಾರತ ಸಂವಿಧಾನದ ಅರಿವು ಪುಸ್ತಕವನ್ನು ನೀಡಲಾಯಿತು.

Related posts

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

 ಡಾ| ಡಿ. ಹೆಗ್ಗಡೆಯವರಿಗೆ “ಯಕ್ಷದ್ರುವ ಪಟ್ಲ ಸಂಭ್ರಮ -2023” ಆಮಂತ್ರಣ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ “ವಿಜಯಗೋಪುರ ” ನಿರ್ಮಾಣಕ್ಕೆ ರೂ. 15 ಲಕ್ಷ ದೇಣಿಗೆ

Suddi Udaya

ಉರುವಾಲು ಕಾರಿಂಜ ಬಾಕಿಮಾರು ದೈವಸ್ಥಾನದ “ಕಾರಿಂಜ ಶ್ರೀ ಕಲ್ಕುಡ” ಧ್ವನಿ ಸುರುಳಿ ಬಿಡುಗಡೆ

Suddi Udaya

ಡಿ.31: ಬಳಂಜ ಬೋಂಟ್ರೊಟ್ಟುಗುತ್ತು ಧರ್ಮದೈವಗಳ ಮೂಲಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ ಹಾಗೂ ಕೇತುಲ್ಲಾಯ ದೈವಕ್ಕೆ ಪಂಚಪರ್ವ ಸೇವೆ

Suddi Udaya

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನೂತನ ಎಂಡೋಸ್ಕೋಪಿ ವಿಭಾಗ

Suddi Udaya
error: Content is protected !!