September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕ ತರಬೇತಿ ಸಂಸ್ಥೆ ಉಜಿರೆ ಇಲ್ಲಿ ಇಂದು ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾಲಯ ಹಾಗೂ ಯೋಗ ವಿಜ್ಞಾನ ಇಲ್ಲಿನ ಹಿರಿಯ ವಿದ್ಯಾರ್ಥಿನಿ ಡಾ. ಗೀತಾಶ್ರಿ ಉದ್ಘಾಟಿಸಿ ಮಾತನಾಡಿ ಕಾರ್ಯಕ್ರಮದ ದ್ಯೇಯ ನಮಗಾಗಿ ಮತ್ತು ಸಮಾಜಕ್ಕಾಗಿ ಇದ್ದು ನಮ್ಮ ಮಾನಸಿಕ ಒತ್ತಡ, ದೈಹಿಕ ಆರೋಗ್ಯ, ಭಾವನಾತ್ಮಕ ಸ್ಥಿರತೆಯನ್ನು ಕಾಪಾಡಲು ಸಹಕರಿಯಾಗುತ್ತದೆ ಜೊತೆಗೆ ಯೋಗವು ನಮ್ಮ ಸ್ವ-ಸಾಮರ್ಥ್ಯ, ದೇಹದ ತೂಕ ಮತ್ತು ದೇಹವನ್ನು ನಮ್ಯತೆಯಲ್ಲಿ ಇಡಲು ಸಹಕಾರಿಯಾಗುತ್ತದೆ ಎಂದು ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಪ್ರಾಂಶುಪಾಲರಾದ ವಿ. ಪ್ರಕಾಶ ಕಾಮತ್ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಯೋಗ ದೇಹದ ಅಸಮತಲನ ಕಾಪಾಡುವ ಜೊತೆಗೆ ಮಾನಸಿಕ ಖಿನ್ನತೆ ಹೋಗಲಾಡಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು.


ಕಾರ್ಯಕ್ರಮದ ನಿರೂಪಣೆಯನ್ನು ಆಶಿಕ ನಿರ್ವಹಿಸಿ, ಶಾಲಿನಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಕಳ್ಳತನ ಪ್ರಕರಣ: ಬೆಳ್ತಂಗಡಿ ಪೊಲೀಸರಿಂದ ಅಂತರ್ ರಾಜ್ಯ ಕುಖ್ಯಾತ ಕಳ್ಳನ ಬಂಧನ

Suddi Udaya

ಮೂಡುಕೋಡಿ ಹಾ.ಉ.ಸ. ಸಂಘ: ಅಧ್ಯಕ್ಷರಾಗಿ ಪುರುಷೋತ್ತಮ ರಾವ್, ಉಪಾಧ್ಯಕ್ಷರಾಗಿ ರಾಕೇಶ್ ಕುಮಾರ್

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಕಳ್ಳರು: ನಾಲ್ಕು ಕಾಣಿಕೆ ಡಬ್ಬಿಗಳ ಕಳವು

Suddi Udaya

ಬೆಳ್ತಂಗಡಿ: ಜೈನ್‌ಪೇಟೆ ನಿವಾಸಿ ರಮೇಶ್ ಆಚಾರ್ಯ ನಿಧನ

Suddi Udaya

ಇಳಂತಿಲ ಗ್ರಾಮದ ಕಟ್ಟೆಚಾರು ನಿವಾಸಿ ಕುಶಾಲಪ್ಪ ಗೌಡ ನಿಧನ

Suddi Udaya

ಅರಸಿನಮಕ್ಕಿ: ಅಂಗಡಿ ಗುಡ್ಡೆ ನಿವಾಸಿ ಶ್ರೀಮತಿ ಬಾಲಕಿ ನಿಧನ

Suddi Udaya
error: Content is protected !!