September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ


ಕೊಯ್ಯೂರು : “ಮಾನಸಿಕ ಮತ್ತು ದೈಹಿಕ ಸ್ವಾಸ್ತ್ಯ ಕಾಪಾಡಲು ಯೋಗ ಅತ್ಯಂತ ಅವಶ್ಯಕತೆಯಾಗಿದೆ. ಯೋಗಾಭ್ಯಾಸವನ್ನು ನಮ್ಮ ಜೀವನದ ಅವಿಭಾಜ್ಯ ಅಂಗವನ್ನಾ ಗಿಸಬೇಕು ” ಎಂದು ಕೊಯ್ಯೂರು ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ರಾಧಾಕೃಷ್ಣ ತಚ್ಚಮೆ ಅಭಿಪ್ರಾಯ ಪಟ್ಟರು.

ಅವರು ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಉದ್ಘಾಟನೆ ನೆರವೇರಿಸಿ ಯೋಗದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಪ್ರೌಢ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಪ್ರವೀಣ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಮೋಹನ್ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ದ ವಿದ್ಯಾರ್ಥಿನಿ ಕುಮಾರಿ ಅಭಿಜ್ಞಾ ವಿ. ಎಮ್. ವಿದ್ಯಾರ್ಥಿಗಳಿಗೆ ಯೋಗ ತರಬೇತಿಯನ್ನು ನಿರ್ವಹಿಸಿದರು.
ವಿದ್ಯಾರ್ಥಿನಿಯರಾದ ಭವ್ಯ, ಪ್ರಜ್ಞಾ, ಪ್ರಮಿತ, ನಿಶ್ಮಿತಾ, ಕವಿತಾ ಪ್ರಾರ್ಥನೆ ಗೈದರು.
ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಪ್ರೀತಿ ಎನ್. ಸ್ವಾಗತಿಸಿ,ಸಮಾಜ ಶಾಸ್ತ್ರ ಉಪನ್ಯಾಸಕ ಶ್ರೀ ಮಾಯಿಲ ವಂದಿಸಿದರು. ಇತಿಹಾಸ ಉಪನ್ಯಾಸಕ ಲಕ್ಷ್ಮಣ ಗೌಡ ಕಾರ್ಯಕ್ರಮ ನಿರ್ವಹಣೆ ಗೈದರು.

Related posts

ಆ.20-22: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ

Suddi Udaya

ಪಿಯುಸಿ ಫಲಿತಾಂಶ: ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನ ಅಲ್ಶಾನಾ ಗೆ 535 ಅಂಕ

Suddi Udaya

ವಶಕ್ಕೆ ಪಡೆಯಲಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಬಂಧನ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ರಬ್ಬರ್ ಟ್ಯಾಪರ್ ಕಾರ್ಮಿಕರ ಸಂಘದ ಅಧ್ಯಕ್ಷ ಕಾಂಗ್ರೆಸ್ ಸೇರ್ಪಡೆ

Suddi Udaya

ಮುಂಡಾಜೆ: ಕಾನೂನು ಅರಿವು ಕಾರ್ಯಕ್ರಮ

Suddi Udaya

ಉಜಿರೆ ರುಡ್‌ಸೆಟ್ ನಲ್ಲಿ ಇಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!