23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಗತಿ ಆರಂಭ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಶ್ರೀ ಧ ಮಂ ಆಡಳಿತ ಮಂಡಳಿಯ ವತಿಯಿಂದ ಉಚಿತ ಯಕ್ಷಗಾನ ತರಗತಿಯು ಆರಂಭವಾಯಿತು. ವಾರದಲ್ಲಿ ಒಂದು ತರಗತಿಯು ನಿರಂತರವಾಗಿ ನಡೆಯಲಿದ್ದು, ಇದರ ಉದ್ಘಾಟನೆಯನ್ನು ನೆರವೇರಿಸಿದ ಬೆಳಾಲು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ದಾಮೋದರ ಗೌಡ ಸುರುಳಿಯವರು ಮಾತನಾಡುತ್ತಾ, ಯಕ್ಷಗಾನ ಕಲಿಕೆಯ ಮೂಲಕ ನಮ್ಮ ಪುರಾಣಗಳ ಬಗ್ಗೆ ತಿಳುವಳಿಕೆಯೊಂದಿಗೆ, ಜೀವನ ಮೌಲ್ಯಗಳ ಅರಿವಿನೊಂದಿಗೆ ಸಂಸ್ಕೃತಿಯ ಪರಿಚಯ ಮತ್ತು ಸಂಸ್ಕಾರವೂ ಸಿಗಲಿದೆಯೆಂದು ಅಭಿಪ್ರಾಯಪಟ್ಟರು.

ಸಮಾರಂಭದ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರು ವಹಿಸಿದ್ದರು. ಯಕ್ಷಗಾನ ನಾಟ್ಯ ಗುರುಗಳಾಗಿ ಖ್ಯಾತ ಯಕ್ಷಗಾನ ಕಲಾವಿದರಾದ ಪಿ. ಲಕ್ಷ್ಮಣ ಗೌಡರವರು ತರಬೇತಿಯನ್ನು ನೀಡಲಿದ್ದಾರೆ. ವೇದಿಕೆಯಲ್ಲಿ ಶಿಕ್ಷಕ ಸಿಬ್ಬಂದಿಗಳೆಲ್ಲರು ಉಪಸ್ಥಿತರಿದ್ದರು.

ನಾಟ್ಯ ತರಗತಿಯ ವಿದ್ಯಾರ್ಥಿಗಳಾದ ಕು. ಅಶ್ವಿನಿ ಸ್ವಾಗತಿಸಿ, ಕೀರ್ತಿ ವಂದಿಸಿದರು, ಕು. ಅಂಕಿತಾ ಕಾರ್ಯಕ್ರಮ ನಿರೂಪಿಸಿದರು.

Related posts

ಕುಂಭಶ್ರೀ ವಿದ್ಯಾ ಸಂಸ್ಥೆಯಲ್ಲಿ ವಲಯ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರನ್ನು ಭೇಟಿಯಾಗಿ ವಿವಿಧ ಬೇಡಿಕೆಯನ್ನು ಸಲ್ಲಿಸಿದ ರಕ್ಷಿತ್ ಶಿವರಾಮ್

Suddi Udaya

ಪರೀಕ ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ವಾಲಿಬಾಲ್ ಪಂದ್ಯಾಟ; ಯಕ್ಷಿತ ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ನ.18: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಪಂಚಾಯತ್‌ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರುನಲ್ಲಿ ಗ್ರಾಮ ಪಂಚಾಯತ್ ನೌಕರರ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ

Suddi Udaya
error: Content is protected !!