July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಗತಿ ಆರಂಭ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಶ್ರೀ ಧ ಮಂ ಆಡಳಿತ ಮಂಡಳಿಯ ವತಿಯಿಂದ ಉಚಿತ ಯಕ್ಷಗಾನ ತರಗತಿಯು ಆರಂಭವಾಯಿತು. ವಾರದಲ್ಲಿ ಒಂದು ತರಗತಿಯು ನಿರಂತರವಾಗಿ ನಡೆಯಲಿದ್ದು, ಇದರ ಉದ್ಘಾಟನೆಯನ್ನು ನೆರವೇರಿಸಿದ ಬೆಳಾಲು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ದಾಮೋದರ ಗೌಡ ಸುರುಳಿಯವರು ಮಾತನಾಡುತ್ತಾ, ಯಕ್ಷಗಾನ ಕಲಿಕೆಯ ಮೂಲಕ ನಮ್ಮ ಪುರಾಣಗಳ ಬಗ್ಗೆ ತಿಳುವಳಿಕೆಯೊಂದಿಗೆ, ಜೀವನ ಮೌಲ್ಯಗಳ ಅರಿವಿನೊಂದಿಗೆ ಸಂಸ್ಕೃತಿಯ ಪರಿಚಯ ಮತ್ತು ಸಂಸ್ಕಾರವೂ ಸಿಗಲಿದೆಯೆಂದು ಅಭಿಪ್ರಾಯಪಟ್ಟರು.

ಸಮಾರಂಭದ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರು ವಹಿಸಿದ್ದರು. ಯಕ್ಷಗಾನ ನಾಟ್ಯ ಗುರುಗಳಾಗಿ ಖ್ಯಾತ ಯಕ್ಷಗಾನ ಕಲಾವಿದರಾದ ಪಿ. ಲಕ್ಷ್ಮಣ ಗೌಡರವರು ತರಬೇತಿಯನ್ನು ನೀಡಲಿದ್ದಾರೆ. ವೇದಿಕೆಯಲ್ಲಿ ಶಿಕ್ಷಕ ಸಿಬ್ಬಂದಿಗಳೆಲ್ಲರು ಉಪಸ್ಥಿತರಿದ್ದರು.

ನಾಟ್ಯ ತರಗತಿಯ ವಿದ್ಯಾರ್ಥಿಗಳಾದ ಕು. ಅಶ್ವಿನಿ ಸ್ವಾಗತಿಸಿ, ಕೀರ್ತಿ ವಂದಿಸಿದರು, ಕು. ಅಂಕಿತಾ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಕಲ್ಮಂಜದಲ್ಲಿ ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರ ಕಾರ್ಯಕ್ರಮ

Suddi Udaya

ಪೆರಿಂಜೆ ಮದರಸದಲ್ಲಿ ಇಶಲ್ ಮದೀನ ಕಾರ್ಯಕ್ರಮ

Suddi Udaya

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ

Suddi Udaya

ಸರ್ಕಾರಿ ಪದವಿಪೂರ್ವ ಕಾಲೇಜು, ಕೊಯ್ಯೂರು -ಪ್ರಥಮ ಪಿ ಯು ಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ :

Suddi Udaya

ಮಾ.30-ಎ.2: ಪಿಲ್ಯ ಬರಯ-ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya
error: Content is protected !!